ಸಾಂಬ್ರಾ:ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಲ್ಲೆಹೋಳ ಗ್ರಾಮದಲ್ಲಿ ₹ 60 ಲಕ್ಷ ವೆಚ್ಚದಲ್ಲಿ ಕೈಗೆತ್ತಿಕೊಂಡ ರಸ್ತೆ ಕಾಮಗಾರಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಶನಿವಾರ ಚಾಲನೆ ನೀಡಿದರು.
‘ಚುನಾವಣೆ ಹತ್ತಿರ ಬಂದರೂ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳ ಸರಣಿ ಮುಂದುವರಿದಿದೆ. ಪ್ರತಿ ದಿನ ಒಂದಿಲ್ಲೊಂದು ಊರಲ್ಲಿ ಕಾಮಗಾರಿಗಳಿಗೆ ಪೂಜೆ ಇಲ್ಲವೇ ಉದ್ಘಾಟನೆ ನಡೆಯುತ್ತಿದೆ. ಗುಣಮಟ್ಟದ ಕಾಮಗಾರಿಗೆ ಜನ ಸಹಕರಿಸಬೇಕು’ ಎಂದು ಶಾಸಕಿ ಮನವಿ ಮಾಡಿದರು.
₹5 ಲಕ್ಷ ಪರಿಹಾರ: ಕಲ್ಲೆಹೋಳ ಗ್ರಾಮದ ರಾಜು ಕಾಚು ಹಣ್ಣೂರಕರ್ ಎಂಬ ರೈತ ಆರು ತಿಂಗಳ ಹಿಂದೆ ಸಾಲಭಾದೆಯಿಂದ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಅವರ ಕುಟುಂಬಕ್ಕೆ ನೀಡಲಾದ ₹ 5 ಲಕ್ಷದ ಪರಿಹಾರ ಧನದ ಚೆಕ್ ಅನ್ನು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಶನಿವಾರ ಹಸ್ತಾಂತರಿಸಿದರು.