ಮೋದಗಾ ಗ್ರಾಮದ ನಿರ್ಮಲ ನಗರದಲ್ಲಿರುವ ಕಾರ್ಡಿನಲ್ ಗ್ರೇಸಿಯಸ್ ಆಸ್ಪತ್ರೆಯ ಕೋವಿಡ್ ಆರೈಕೆ ಕೇಂದ್ರಕ್ಕೆ ಭೇಟಿ ನೀಡಿ ಸೋಂಕಿತರ ಆರೋಗ್ಯ ಬಗ್ಗೆ ವಿಚಾರಿಸಿ ಆತ್ಮಸ್ಥೈರ್ಯವನ್ನು ತುಂಬಿದರು. ಸೋಂಕಿತರಿಗೆ ಹಣ್ಣುಗಳನ್ನು ವಿತರಿಸಿ, ಸರಿಯಾದ ಚಿಕಿತ್ಸೆ ದೊರೆಯುತ್ತಿರುವ ಬಗ್ಗೆ ಮಾಹಿತಿ ಪಡೆದರು. ಅಗತ್ಯ ಔಷಧೋಪಚಾರ ಕೊರತೆ ಆಗದಂತೆ ನೋಡಿಕೊಳ್ಳಬೇಕ ಎಂದು ಅಧಿಕಾರಿಗಳಿಗೆ ಸೂಚಿಸಿದರು.