‘ಗ್ರಾಮೀಣ ಕ್ಷೇತ್ರದ ಸಮಗ್ರ ಅಭಿವೃದ್ಧಿ ನನ್ನ ಬದ್ಧತೆ. ನಿಗದಿತ ಗುರಿ ಇಟ್ಟುಕೊಂಡು ಕೆಲಸ ಮಾಡುತ್ತಿದ್ದೇನೆ. ಅತಿವೃಷ್ಟಿ, ಕೋವಿಡ್ನಂತಹ ಪ್ರಕೃತಿಯ ಅಸಹಕಾರದಿಂದಾಗಿ ಸ್ವಲ್ಪಮಟ್ಟಿಗೆ ಅಡೆತಡೆ ಉಂಟಾಗಿದೆ. ಆದರೆ, ನನ್ನ ಗುರಿ ಮತ್ತು ಯೋಜನೆಯಲ್ಲಿ ಹಿಂದಡಿ ಇಡುವ ಪ್ರಶ್ನೆಯೇ ಇಲ್ಲ. ಕ್ಷೇತ್ರದ ಜನರ ಸಹಕಾರವೂ ಸಂಪೂರ್ಣವಾಗಿ ಸಿಗುತ್ತಿದೆ. ಹಿಂದೆಂದೂ ಕಾಣದ ರೀತಿಯಲ್ಲಿ ಕ್ಷೇತ್ರ ಅಭಿವೃದ್ಧಿಗೊಳ್ಳುತ್ತಿರುವುದರಿಂದ ಜನರು ನೆಮ್ಮದಿ ಕಾಣುತ್ತಿದ್ದಾರೆ’ ಎಂದರು.