<p>ಬೆಳಗಾವಿ: ‘ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ಹೆಚ್ಚಿನ ಸಮಯ ಮೀಸಲಿಡಬೇಕು. ಉತ್ತಮ ನಾಗರಿಕರಾಗಿ ಬದುಕಲು ಭದ್ರ ಬುನಾದಿ ಹಾಕಿಕೊಳ್ಳಬೇಕು’ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಸಲಹೆ ನೀಡಿದರು.</p>.<p>ಗ್ರಾಮೀಣ ಕ್ಷೇತ್ರದ ಖನಗಾಂವ ಕೆ.ಎಚ್. ಗ್ರಾಮದಲ್ಲಿ ಮಹಾತ್ಮ ಜ್ಯೋತಿಬಾ ಫುಲೆ ಪ್ರತಿಷ್ಠಾನದಿಂದ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸತ್ಕರಿಸಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿ ಜೀವನ ಅತ್ಯಂತ ಪ್ರಮುಖ ಘಟ್ಟವಾಗಿದೆ. ಹೀಗಾಗಿ, ಸಮಯವನ್ನು ಅನಗತ್ಯವಾಗಿ ವ್ಯರ್ಥ ಮಾಡಬಾರದು’ ಎಂದರು.</p>.<p>‘ಸಾಮಾಜಿಕ, ರಾಜಕೀಯ ಮೊದಲಾದ ವ್ಯವಸ್ಥೆಯಲ್ಲಿ ಯುವ ಜನರು ಪ್ರಮುಖ ಪಾತ್ರ ವಹಿಸಬೇಕು. ಆಗ ಮಾತ್ರ ವ್ಯವಸ್ಥೆಯಲ್ಲಿ ಬದಲಾವಣೆ ತರಲು ಸಾಧ್ಯ’ ಎಂದು ಹೇಳಿದರು.</p>.<p>ಪ್ರತಿಷ್ಠಾನದ ಅಧ್ಯಕ್ಷ ಜ್ಯೋತಿಬಾ ಪಾಟೀಲ, ಮುಖಂಡರಾದ ಮಲ್ಲಪ್ಪ ಗಿರಿಯಾಳಕರ, ಬಾಳು ಗಿರಿಯಾಳಕರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿ: ‘ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ಹೆಚ್ಚಿನ ಸಮಯ ಮೀಸಲಿಡಬೇಕು. ಉತ್ತಮ ನಾಗರಿಕರಾಗಿ ಬದುಕಲು ಭದ್ರ ಬುನಾದಿ ಹಾಕಿಕೊಳ್ಳಬೇಕು’ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಸಲಹೆ ನೀಡಿದರು.</p>.<p>ಗ್ರಾಮೀಣ ಕ್ಷೇತ್ರದ ಖನಗಾಂವ ಕೆ.ಎಚ್. ಗ್ರಾಮದಲ್ಲಿ ಮಹಾತ್ಮ ಜ್ಯೋತಿಬಾ ಫುಲೆ ಪ್ರತಿಷ್ಠಾನದಿಂದ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸತ್ಕರಿಸಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿ ಜೀವನ ಅತ್ಯಂತ ಪ್ರಮುಖ ಘಟ್ಟವಾಗಿದೆ. ಹೀಗಾಗಿ, ಸಮಯವನ್ನು ಅನಗತ್ಯವಾಗಿ ವ್ಯರ್ಥ ಮಾಡಬಾರದು’ ಎಂದರು.</p>.<p>‘ಸಾಮಾಜಿಕ, ರಾಜಕೀಯ ಮೊದಲಾದ ವ್ಯವಸ್ಥೆಯಲ್ಲಿ ಯುವ ಜನರು ಪ್ರಮುಖ ಪಾತ್ರ ವಹಿಸಬೇಕು. ಆಗ ಮಾತ್ರ ವ್ಯವಸ್ಥೆಯಲ್ಲಿ ಬದಲಾವಣೆ ತರಲು ಸಾಧ್ಯ’ ಎಂದು ಹೇಳಿದರು.</p>.<p>ಪ್ರತಿಷ್ಠಾನದ ಅಧ್ಯಕ್ಷ ಜ್ಯೋತಿಬಾ ಪಾಟೀಲ, ಮುಖಂಡರಾದ ಮಲ್ಲಪ್ಪ ಗಿರಿಯಾಳಕರ, ಬಾಳು ಗಿರಿಯಾಳಕರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>