ಮುಖಂಡ ಗಜಾನನ ಮಂಗಸೂಳಿ ಮಾತನಾಡಿ, ‘ಕ್ಷೇತ್ರದಲ್ಲಿ ಹಲವು ಸಮಸ್ಯೆಗಳಿವೆ. ಮಾಡಬೇಕಾದ ಅಭಿವೃದ್ಧಿ ಕಾಮಗಾರಿಗಳು ಬಹಳಷ್ಟಿವೆ. ಇದಕ್ಕೆ ಆದ್ಯತೆ ಕೊಡುವುದು ಬಿಟ್ಟು ಕ್ಷೇತ್ರದ ಜನರ್ಯಾರಿಗೂ ಸಿಗದೇ ತಲೆಮರೆಸಿಕೊಂಡಿದ್ದಾರೆ. ಅವರು ಎಲ್ಲಿದ್ದಾರೆಂದು ಗೊತ್ತಿಲ್ಲ. ಹೀಗಾಗಿ, ಅವರನ್ನು ಹುಡುಕಿಕೊಡಬೇಕು, ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಬೇಕು’ ಎಂದು ಮನವಿ ಮಾಡಿದ್ದೇವೆ. ಹಲವು ದಿನಗಳಿಂದ ಇಲ್ಲಿ ಅಭಿವೃದ್ಧಿ ಕುಂಠಿತಗೊಂಡಿದೆ. ಶಾಸಕರು ಕ್ಷೇತ್ರದ ಕಡೆಗೆ ಗಮನಹರಿಸಿಲ್ಲ’ ಎಂದು ದೂರಿದರು.