<p><strong>ಬೆಳಗಾವಿ:</strong> ‘ಸಭೆಗೆ ನಗರಪಾಲಿಕೆ ಮಾಜಿ ಸದಸ್ಯರನ್ನು ಆಹ್ವಾನಿಸಬೇಕಿತ್ತು. ವಾರ್ಡ್ಗಳಲ್ಲಿನ ಸಮಸ್ಯೆಗಳು ಅವರಿಗೆ ಗೊತ್ತಿರುತ್ತವೆ’ ಎಂಬ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ನಿಲುವಿಗೆ ಶಾಸಕರಾದ ಅಭಯ ಪಾಟೀಲ ಆಕ್ಷೇಪ ವ್ಯಕ್ತಪಡಿಸಿದರು.</p>.<p>‘ಎಲ್ಲ ಸಮಸ್ಯೆಗಳನ್ನೂ ನಾವೇ ಹೇಳುತ್ತೇವೆ. ನೀವು ಅವರನ್ನು ಕರೆಸಿ ಗೊಂದಲ ಉಂಟು ಮಾಡುವುದು ಬೇಡ. ಮುಂದೆ ಬಿಜೆಪಿಯಿಂದ ನಗರಪಾಲಿಕೆ ಚುನಾವಣೆ ಎದುರಿಸಬೇಕಾಗಿದೆ. ಹೀಗಾಗಿ, ನಮಗೆ ಸಮಸ್ಯೆ ಉಂಟು ಮಾಡಬೇಡಿ’ ಎಂದು ಅಭಯ ಹೇಳಿದರು.</p>.<p>‘ಅವರಲ್ಲಿ ಶೇ 90ರಷ್ಟು ಮಂದಿ ರಾಜಕಾರಣ ಮಾಡುವವರೇ ಆಗಿದ್ದಾರೆ. ಅವರು ಬಂದರೆ ಸಮಸ್ಯೆಯಾಗುತ್ತದೆ’ ಎಂದರು. ಇದಕ್ಕೆ ಅನಿಲ ಬೆನಕೆ ದನಿಗೂಡಿಸಿದರು. ನಗರದ ಸಮಸ್ಯೆಗಳನ್ನು ಗಮನಕ್ಕೆ ತಂದರು.</p>.<p>‘₹ 100 ಬಾಂಡ್ ಪೇಪರ್ ಮೇಲೆ ನಿವೇಶನ ಖರೀದಿಸಿರುವವರು, ಮನೆ ಕಟ್ಟಿರುವವರ ಸಮಸ್ಯೆ ಬಗೆಹರಿಸಬೇಕು. ಈಗಾಗಲೇ ನಿರ್ಮಿಸಿಕೊಂಡಿರುವವರಿಗೆ ತೊಂದರೆ ಕೊಡಬಾರದು. ಮುಂದೆ ಈ ವ್ಯವಹಾರ ನಡೆಯದಂತೆ ನೋಡಿಕೊಳ್ಳಬೇಕು’ ಎಂದು ಶಾಸಕರು ಒತ್ತಾಯಿಸಿದರು.</p>.<p>ಸಭೆಯಲ್ಲಿ ರಮೇಶ ಜಾರಕಿಹೊಳಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರಿಗೆ ‘ಪೌರ ಸನ್ಮಾನ’ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಸಭೆಗೆ ನಗರಪಾಲಿಕೆ ಮಾಜಿ ಸದಸ್ಯರನ್ನು ಆಹ್ವಾನಿಸಬೇಕಿತ್ತು. ವಾರ್ಡ್ಗಳಲ್ಲಿನ ಸಮಸ್ಯೆಗಳು ಅವರಿಗೆ ಗೊತ್ತಿರುತ್ತವೆ’ ಎಂಬ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ನಿಲುವಿಗೆ ಶಾಸಕರಾದ ಅಭಯ ಪಾಟೀಲ ಆಕ್ಷೇಪ ವ್ಯಕ್ತಪಡಿಸಿದರು.</p>.<p>‘ಎಲ್ಲ ಸಮಸ್ಯೆಗಳನ್ನೂ ನಾವೇ ಹೇಳುತ್ತೇವೆ. ನೀವು ಅವರನ್ನು ಕರೆಸಿ ಗೊಂದಲ ಉಂಟು ಮಾಡುವುದು ಬೇಡ. ಮುಂದೆ ಬಿಜೆಪಿಯಿಂದ ನಗರಪಾಲಿಕೆ ಚುನಾವಣೆ ಎದುರಿಸಬೇಕಾಗಿದೆ. ಹೀಗಾಗಿ, ನಮಗೆ ಸಮಸ್ಯೆ ಉಂಟು ಮಾಡಬೇಡಿ’ ಎಂದು ಅಭಯ ಹೇಳಿದರು.</p>.<p>‘ಅವರಲ್ಲಿ ಶೇ 90ರಷ್ಟು ಮಂದಿ ರಾಜಕಾರಣ ಮಾಡುವವರೇ ಆಗಿದ್ದಾರೆ. ಅವರು ಬಂದರೆ ಸಮಸ್ಯೆಯಾಗುತ್ತದೆ’ ಎಂದರು. ಇದಕ್ಕೆ ಅನಿಲ ಬೆನಕೆ ದನಿಗೂಡಿಸಿದರು. ನಗರದ ಸಮಸ್ಯೆಗಳನ್ನು ಗಮನಕ್ಕೆ ತಂದರು.</p>.<p>‘₹ 100 ಬಾಂಡ್ ಪೇಪರ್ ಮೇಲೆ ನಿವೇಶನ ಖರೀದಿಸಿರುವವರು, ಮನೆ ಕಟ್ಟಿರುವವರ ಸಮಸ್ಯೆ ಬಗೆಹರಿಸಬೇಕು. ಈಗಾಗಲೇ ನಿರ್ಮಿಸಿಕೊಂಡಿರುವವರಿಗೆ ತೊಂದರೆ ಕೊಡಬಾರದು. ಮುಂದೆ ಈ ವ್ಯವಹಾರ ನಡೆಯದಂತೆ ನೋಡಿಕೊಳ್ಳಬೇಕು’ ಎಂದು ಶಾಸಕರು ಒತ್ತಾಯಿಸಿದರು.</p>.<p>ಸಭೆಯಲ್ಲಿ ರಮೇಶ ಜಾರಕಿಹೊಳಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರಿಗೆ ‘ಪೌರ ಸನ್ಮಾನ’ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>