<p><strong>ಗೋಕಾಕ (ಬೆಳಗಾವಿ ಜಿಲ್ಲೆ): </strong>ಇಲ್ಲಿನ ಶಾಸಕ ರಮೇಶ ಜಾರಕಿಹೊಳಿ ಅವರು ವೈಯಕ್ತಿಕವಾಗಿ ಪತ್ರಗಳನ್ನು ಕಳುಹಿಸುವ ಮೂಲಕ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಎದುರಿಸಲಿರುವ ವಿದ್ಯಾರ್ಥಿಗಳಿಗೆ ಪ್ರೇರಣೆ ಮತ್ತು ಹುಮ್ಮಸ್ಸು ತುಂಬಲು ಪ್ರಯತ್ನಿಸಿದ್ದಾರೆ.</p>.<p>ವಿದ್ಯಾರ್ಥಿಗಳು ಹಾಗೂ ಪ್ರೌಢಶಾಲೆಯ ಸಹ ಶಿಕ್ಷಕರಿಗೆಲ್ಲ ಪತ್ರ (ಇನ್ಲ್ಯಾಂಡ್ ಲೆಟರ್) ಬರೆದದ್ದಾರೆ. ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಮಕ್ಕಳಿಗೆ ಆತ್ಮಸ್ಥೈರ್ಯ ಹೆಚ್ಚಿಸುವ ಕೆಲಸ ಮಾಡಿದ್ದಾರೆ. ಓದಿನತ್ತ ಗಮನಹರಿಸುವಂತೆ ಸಲಹೆ ನೀಡಿದ್ದಾರೆ. ಈ ಪತ್ರ ಅಭಿಯಾನ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪಾಲಕರಲ್ಲಿ ಹುಮ್ಮಸ್ಸು ಮೂಡಿಸಿದೆ ಎನ್ನುತ್ತಾರೆ ಅಧಿಕಾರಿಗಳು.</p>.<p>ಗೋಕಾಕ ವಲಯದ 5ಸಾವಿರ ವಿದ್ಯಾರ್ಥಿಗಳು ಹಾಗೂ ಸಹ ಶಿಕ್ಷಕರಿಗೆ ಮುದ್ರಿತ ಪತ್ರ ಕಳುಹಿಸಿ ಶುಭ ಹಾರೈಸಿದ್ದಾರೆ.</p>.<p>ಈ ಬಗ್ಗೆ ಪ್ರತಿಕ್ರಿಯಿಸಿದ ಬಿಇಒ ಜಿ.ಬಿ. ಬಳಗಾರ, ‘ಕೊರೊನಾದಿಂದ ಭಯಭೀತರಾಗಿದ್ದ ವಿದ್ಯಾರ್ಥಿಗಳಿಗೆ ಶಾಸಕರ ಪತ್ರ ಧೈರ್ಯ ತುಂಬಿದೆ. ಓದಿನ ಆಸಕ್ತಿ ಹೆಚ್ಚಿಸಿದೆ. ಶೈಕ್ಷಣಿಕವಾಗಿ ಸದಾ ನಮಗೆ ಮಾರ್ಗದರ್ಶನ ನೀಡುತ್ತಿರುವ ಶಾಸಕರ ಈ ಪತ್ರ ಅಭಿಯಾನ ಮಕ್ಕಳಲ್ಲಿ ಪರೀಕ್ಷೆ ಬಗ್ಗೆ ಇರುವ ಭಯ ನಿವಾರಿಸಿದೆ’ ಎಂದರು.</p>.<p>‘ಪತ್ರ ಸಿಕ್ಕ ವಿದ್ಯಾರ್ಥಿಗಳು ಹಾಗೂ ಪಾಲಕರು ಶಾಸಕರ ವಿನೂತನ ಕಾರ್ಯವನ್ನು ಕೊಂಡಾಡಿ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ’ ಎಂದು ತಿಳಿಸಿದರು.</p>.<p>‘ಶಾಸಕರು ನಮಗೆ ಪತ್ರ ಬರೆದು ಹಲವು ವಿಚಾರಗಳನ್ನು ತಿಳಿಸಿದ್ದಾರೆ. ಅದನ್ನು ಓದಿ ರೋಮಾಂಚನವಾಯಿತು. ಹೆದರಿಕೆ ಇಲ್ಲದೆ ಪರೀಕ್ಷೆ ಎದುರಿಸಲು ಶಕ್ತಿ ಬಂದತಾಗಿದೆ’ ಎಂದು ಖನಗಾಂವದ ಆದರ್ಶ ವಿದ್ಯಾಲಯದ ವಿದ್ಯಾರ್ಥಿನಿ ಮೇಘಾ ಉಪ್ಪಾರ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಕಾಕ (ಬೆಳಗಾವಿ ಜಿಲ್ಲೆ): </strong>ಇಲ್ಲಿನ ಶಾಸಕ ರಮೇಶ ಜಾರಕಿಹೊಳಿ ಅವರು ವೈಯಕ್ತಿಕವಾಗಿ ಪತ್ರಗಳನ್ನು ಕಳುಹಿಸುವ ಮೂಲಕ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಎದುರಿಸಲಿರುವ ವಿದ್ಯಾರ್ಥಿಗಳಿಗೆ ಪ್ರೇರಣೆ ಮತ್ತು ಹುಮ್ಮಸ್ಸು ತುಂಬಲು ಪ್ರಯತ್ನಿಸಿದ್ದಾರೆ.</p>.<p>ವಿದ್ಯಾರ್ಥಿಗಳು ಹಾಗೂ ಪ್ರೌಢಶಾಲೆಯ ಸಹ ಶಿಕ್ಷಕರಿಗೆಲ್ಲ ಪತ್ರ (ಇನ್ಲ್ಯಾಂಡ್ ಲೆಟರ್) ಬರೆದದ್ದಾರೆ. ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಮಕ್ಕಳಿಗೆ ಆತ್ಮಸ್ಥೈರ್ಯ ಹೆಚ್ಚಿಸುವ ಕೆಲಸ ಮಾಡಿದ್ದಾರೆ. ಓದಿನತ್ತ ಗಮನಹರಿಸುವಂತೆ ಸಲಹೆ ನೀಡಿದ್ದಾರೆ. ಈ ಪತ್ರ ಅಭಿಯಾನ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪಾಲಕರಲ್ಲಿ ಹುಮ್ಮಸ್ಸು ಮೂಡಿಸಿದೆ ಎನ್ನುತ್ತಾರೆ ಅಧಿಕಾರಿಗಳು.</p>.<p>ಗೋಕಾಕ ವಲಯದ 5ಸಾವಿರ ವಿದ್ಯಾರ್ಥಿಗಳು ಹಾಗೂ ಸಹ ಶಿಕ್ಷಕರಿಗೆ ಮುದ್ರಿತ ಪತ್ರ ಕಳುಹಿಸಿ ಶುಭ ಹಾರೈಸಿದ್ದಾರೆ.</p>.<p>ಈ ಬಗ್ಗೆ ಪ್ರತಿಕ್ರಿಯಿಸಿದ ಬಿಇಒ ಜಿ.ಬಿ. ಬಳಗಾರ, ‘ಕೊರೊನಾದಿಂದ ಭಯಭೀತರಾಗಿದ್ದ ವಿದ್ಯಾರ್ಥಿಗಳಿಗೆ ಶಾಸಕರ ಪತ್ರ ಧೈರ್ಯ ತುಂಬಿದೆ. ಓದಿನ ಆಸಕ್ತಿ ಹೆಚ್ಚಿಸಿದೆ. ಶೈಕ್ಷಣಿಕವಾಗಿ ಸದಾ ನಮಗೆ ಮಾರ್ಗದರ್ಶನ ನೀಡುತ್ತಿರುವ ಶಾಸಕರ ಈ ಪತ್ರ ಅಭಿಯಾನ ಮಕ್ಕಳಲ್ಲಿ ಪರೀಕ್ಷೆ ಬಗ್ಗೆ ಇರುವ ಭಯ ನಿವಾರಿಸಿದೆ’ ಎಂದರು.</p>.<p>‘ಪತ್ರ ಸಿಕ್ಕ ವಿದ್ಯಾರ್ಥಿಗಳು ಹಾಗೂ ಪಾಲಕರು ಶಾಸಕರ ವಿನೂತನ ಕಾರ್ಯವನ್ನು ಕೊಂಡಾಡಿ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ’ ಎಂದು ತಿಳಿಸಿದರು.</p>.<p>‘ಶಾಸಕರು ನಮಗೆ ಪತ್ರ ಬರೆದು ಹಲವು ವಿಚಾರಗಳನ್ನು ತಿಳಿಸಿದ್ದಾರೆ. ಅದನ್ನು ಓದಿ ರೋಮಾಂಚನವಾಯಿತು. ಹೆದರಿಕೆ ಇಲ್ಲದೆ ಪರೀಕ್ಷೆ ಎದುರಿಸಲು ಶಕ್ತಿ ಬಂದತಾಗಿದೆ’ ಎಂದು ಖನಗಾಂವದ ಆದರ್ಶ ವಿದ್ಯಾಲಯದ ವಿದ್ಯಾರ್ಥಿನಿ ಮೇಘಾ ಉಪ್ಪಾರ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>