ಗೋಕಾಕ: ‘ಮರಾಠಾ ಅಭಿವೃದ್ಧಿ ನಿಗಮ ರಚನೆ ಮುಂಬರುವ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಮಾಡಿರುವ ತಂತ್ರವಷ್ಟೇ. ಹಿಂದುಳಿದವರಿಗೆ ಎಲ್ಲ ರೀತಿಯ ಅನುಕೂಲಗಳನ್ನು ಒದಗಿಸಬೇಕಾದ ಸರ್ಕಾರ ರಾಜಕೀಯ ಉದ್ದೇಶಗಳಿಂದಾಗಿ ಕೆಲವು ಜಾತಿಗಳವರಿಗೆ ನಿಗಮ ಸ್ಥಾಪನೆಗೆ ಮುಂದಾಗುತ್ತಿರುವ ಬಿಜೆಪಿ ಸರ್ಕಾರದ ನಿಲುವು ಪ್ರಜಾಪ್ರಭುತ್ವ ವಿರೋಧಿಯಾಗಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಟೀಕಿಸಿದರು.