‘ಇಲ್ಲಿ ಈ ಬಾರಿ ಸಾಕಷ್ಟು ಮಳೆಯಾದ ಪರಿಣಾಮ ಹೊಲ–ಗದ್ದೆಗಳಲ್ಲಿ ಅಪಾರ ಪ್ರಮಾಣದ ನೀರು ನುಗ್ಗಿದ್ದು, ಬಡ ಜನರ ಬದುಕು ತತ್ತರಿಸಿದೆ. ಹೀಗಾಗಿ, ಮುಂದಿನ ವರ್ಷಗಳಲ್ಲಿ ಮಳೆಗೆ ಮುನ್ನವೇ ಎಚ್ಚರಿಕೆ ವಹಿಸುವಂತೆ ಹಾಗೂ ಜಮೀನುಗಳಿಗೆ ನೀರು ನುಗ್ಗದಂತೆ ನೋಡಿಕೊಳ್ಳಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಹಾನಿಗೊಳಗಾದ ಕುಟುಂಬಗಳಿಗೆ ಸೂಕ್ತ ಪರಿಹಾರ ಕೊಡಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.