ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಗೋಕಾಕ ಕ್ಷೇತ್ರ ಮಾದರಿಯಾಗಿಸಲು ಶಾಸಕರ ಶ್ರಮ’

Last Updated 19 ಜನವರಿ 2022, 15:14 IST
ಅಕ್ಷರ ಗಾತ್ರ

ಗೋಕಾಕ: ‘ಶಾಸಕ ರಮೇಶ ಜಾರಕಿಹೊಳಿ ಅವರು ಸರ್ಕಾರದಿಂದ ಸಾಕಷ್ಟು ಅನುದಾನ ತರುವ ಮೂಲಕ ಮತಕ್ಷೇತ್ರವನ್ನು ಮಾದರಿಯಾಗಿಸಲು ಶ್ರಮಿಸುತ್ತಿದ್ದಾರೆ’ ಎಂದು ಕೆಎಂಎಫ್‌ ನಿರ್ದೇಶಕ ಅಮರನಾಥ ಜಾರಕಿಹೊಳಿ ಹೇಳಿದರು.

ತಾಲ್ಲೂಕಿನ ಮಾಲದಿನ್ನಿ ಗ್ರಾಮದಲ್ಲಿ ಜಲಜೀವನ ಅಭಿಯಾನದಲ್ಲಿ ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದ ಕಾಮಗಾರಿ ಮತ್ತು ಸಿ.ಸಿ. ರಸ್ತೆ ಹಾಗೂ ಚರಂಡಿ ನಿರ್ಮಾಣಕ್ಕೆ ಚಾಲನೆ ನೀಡಿ, ಪ್ರೌಢಶಾಲೆಯ ನೂತನ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದರು.

‘ಅಭಿವೃದ್ಧಿಗಾಗಿ ಶಾಸಕರನ್ನು ಎಲ್ಲರೂ ಬೆಂಬಲಿಸುವ ಮೂಲಕ ಅವರ ಕೈ ಬಲಪಡಿಸಬೇಕು’ ಎಂದು ಕೋರಿದರು.

ಅವರನ್ನು ಗ್ರಾಮಸ್ಥರು ಬೆಳ್ಳಿ ಗದೆ ನೀಡಿ ಸತ್ಕರಿಸಿದರು.

ಗ್ರಾ.ಪಂ. ಅಧ್ಯಕ್ಷೆ ರುಕ್ಮವ್ವ ಭರಮನ್ನವರ, ಗ್ರಾ.ಪಂ. ಸದಸ್ಯರಾದ ಲಕ್ಕಪ್ಪ ಬಂಡಿ, ವಕೀಲ ಮಲ್ಲಿಕಾರ್ಜುನ ಸುಬ್ಬಾಪೂರಮಠ, ಯಲ್ಲಪ್ಪ ಬಬಲಿ, ಮುತ್ತೆಪ್ಪ ಖಾನಪ್ಪನವರ, ವಕೀಲ ರಮೇಶ ಭಂಡಿ, ಶಾಸಕರ ಆಪ್ತಸಹಾಯಕ ಭೀಮಗೌಡ ಪೋಲಿಸಗೌಡರ, ಮುಖಂಡರಾದ ತುಕಾರಾಮ ಕಾಗಲ, ಮಡ್ಡೆಪ್ಪ ತೋಳಿನವರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT