ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯಿಂದ ಒಂದು ಸ್ಥಾನಕ್ಕೆ ಸ್ಪರ್ಧೆ: ಶಾಸಕ ಬಾಲಚಂದ್ರ ಜಾರಕಿಹೊಳಿ

Last Updated 13 ನವೆಂಬರ್ 2021, 12:22 IST
ಅಕ್ಷರ ಗಾತ್ರ

ಗೋಕಾಕ: ‘ಸ್ಥಳೀಯ ಸಂಸ್ಥೆಗಳಿಂದ ನಡೆಯುವ ವಿಧಾನಪರಿಷತ್ ಚುನಾವಣೆಯಲ್ಲಿ ಈಗಿರುವ ಮಾಹಿತಿಯಂತೆ ಬಿಜೆಪಿಯಿಂದ ಒಬ್ಬರನ್ನು ಅಭ್ಯರ್ಥಿಯನ್ನಾಗಿ ಮಾಡಬಹುದೆಂಬ ಲೆಕ್ಕಾಚಾರವಿದೆ. ಪಕ್ಷದ ಮುಖಂಡರು ಈ ಬಗ್ಗೆ ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಿದ್ದಾರೆ’ ಎಂದು ಕೆಎಂಎಫ್ ಅಧ್ಯಕ್ಷರೂ ಅಗಿರುವಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.

ಹೊರವಲಯದಲ್ಲಿರುವ ಬಸವೇಶ್ವರ ಸಭಾಭವನದಲ್ಲಿ ಶುಕ್ರವಾರ ನಡೆದ ಅರಭಾವಿ ಮತಕ್ಷೇತ್ರದ ಎಲ್ಲ ಗ್ರಾಮ ಪಂಚಾಯಿತಿಗಳ ಸದಸ್ಯರು ಹಾಗೂ ಮುಖಂಡರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

‘ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಜೊತೆಗೆ ನಮ್ಮ ಸಂಘಟನೆಯ ಅಭ್ಯರ್ಥಿಯನ್ನು ಬೆಂಬಲಿಸಿ ಅವರನ್ನು ಬಹುಮತದಿಂದ ಆಯ್ಕೆ ಮಾಡಬೇಕು’ ಎಂದು ಮಾರ್ಮಿಕವಾಗಿ ಹೇಳಿದರು.

‘ಕೇಂದ್ರ ಹಾಗೂ ರಾಜ್ಯದಲ್ಲಿ ನಮ್ಮ ಸರ್ಕಾರ ಉತ್ತಮವಾಗಿ ಕೆಲಸ ಮಾಡುತ್ತಿದೆ. ಜನಪರ ಹಾಗೂ ರೈತಪರವಾದ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದೇವೆ. ರಾಜ್ಯದ ಸಮಗ್ರ ಅಭಿವೃದ್ಧಿಗೆ ಬದ್ಧವಿದ್ದೇವೆ. ಪಂಚಾಯತ್‌ರಾಜ್‌ ವ್ಯವಸ್ಥೆಗೆ ಹೆಚ್ಚಿನ ಶಕ್ತಿಯನ್ನು ತುಂಬಲು ಈ ಚುನಾವಣೆಯಲ್ಲಿ ಬಿಜೆಪಿ ಜೊತೆಗೆ ನಮ್ಮ ಸಂಘಟನೆಗೆ ಸೇರಿರುವ ಅಭ್ಯರ್ಥಿಯನ್ನು ಗೆಲ್ಲಿಸಬೇಕು’ ಎಂದು ಕೋರಿದರು.

‘ಅರಭಾವಿ ಹಾಗೂ ಗೋಕಾಕ ಮತಕ್ಷೇತ್ರಗಳಲ್ಲಿ 1,200 ಮತದಾರರಿದ್ದಾರೆ. ಎರಡು ದಶಕಗಳಿಂದ ನಮ್ಮನ್ನು ಬೆಂಬಲಿಸಿ ಆಶೀರ್ವದಿಸುತ್ತಾ ಬಂದಿರುವವರಿಗೆ ಋಣಿಯಾಗಿದ್ದೇವೆ. ನಮ್ಮ ಸಂಘಟನೆಗೆ ಸೇರಿರುವ ಇಬ್ಬರು ಅಭ್ಯರ್ಥಿಗಳು ಗೆಲ್ಲಲಿ. ನಮ್ಮ ಸಂಘಟನೆಗೆ ಹೆಚ್ಚಿನ ಶಕ್ತಿ ನೀಡಲಿ’ ಎಂದು ಪ್ರಾರ್ಥಿಸಿದರು.

ಮುಖಂಡರಾದ ರಾಜೇಂದ್ರ ಸಣ್ಣಕ್ಕಿ, ಬಸಗೌಡ ಪಾಟೀಲ (ಮೆಳವಂಕಿ), ರಾಮಣ್ಣ ಮಹಾರೆಡ್ಡಿ, ಎಂ.ಆರ್. ಭೋವಿ, ಹಣಮಂತ ತೇರದಾಳ, ಗೋವಿಂದ ಕೊಪ್ಪದ, ವಿಠ್ಠಲ ಪಾಟೀಲ, ಮುತ್ತೆಪ್ಪ ಕುಳ್ಳೂರ, ರವೀಂದ್ರ ಪರುಶೆಟ್ಟಿ, ಲಕ್ಷ್ಮಣ ಮುಸಗುಪ್ಪಿ, ಆನಂದ ಮೂಡಲಗಿ ಹಾಗೂ ಬಿಜೆಪಿ ಪದಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT