<p><strong>ಬೆಳಗಾವಿ: ‘</strong>ವಿಧಾನಪರಿಷತ್ ಚುನಾವಣೆಯಲ್ಲಿ ಅರ್ಹ ಮತದಾರರಿಗೆ ಹಕ್ಕು ಚಲಾವಣೆ ಕುರಿತು ಸೂಕ್ತ ತರಬೇತಿಯನ್ನು ಕಡ್ಡಾಯವಾಗಿ ಹಮ್ಮಿಕೊಳ್ಳಬೇಕು’ ಎಂದು ಜಿಲ್ಲಾ ಚುನಾವಣಾಧಿಕಾರಿ ಆರ್. ವೆಂಕಟೇಶಕುಮಾರ್ ಸೂಚನೆ ನೀಡಿದರು.</p>.<p>ಇಲ್ಲಿ ಗುರುವಾರ ನಡೆದ ವಿಡಿಯೊ ಸಂವಾದದಲ್ಲಿ ಮಾತನಾಡಿ, ‘ಈ ಚುನಾವಣೆಯಲ್ಲಿ ಪ್ರಾಶಸ್ತ್ಯದ ಮತಗಳಿರುವುದರಿಂದ ಮತದಾನ ಪ್ರಕ್ರಿಯೆ ಭಿನ್ನವಾಗಿರುತ್ತದೆ. ಆದ್ದರಿಂದ ತರಬೇತಿ ಅಗತ್ಯವಿದೆ’ ಎಂದರು.</p>.<p>‘ಪ್ರಾಶಸ್ತ್ಯದ ಮತ ಇರುವುದರಿಂದ ಮತ ಚಲಾವಣೆಯಲ್ಲಿ ಯಾವುದೇ ಲೋಪಗಳಾದರೆ ಆ ಮತವನ್ನು ಅಸಿಂಧು ಅಥವಾ ತಿರಸ್ಕೃತ ಎಂದು ಪರಿಗಣಿಸಲಾಗುತ್ತದೆ. ಆದ್ದರಿಂದ ಈ ಬಗ್ಗೆ ಮತದಾರರಲ್ಲಿ ಅರಿವು ಮೂಡಿಸಬೇಕು ಮತ್ತು ಪ್ರಾಯೋಗಿಕವಾಗಿ ಮತಚಲಾವಣೆ ಬಗ್ಗೆ ತರಬೇತಿ ನೀಡಬೇಕು. ಈ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿ ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕ್ರಮ ವಹಿಸಬೇಕು’ ಎಂದು ತಿಳಿಸಿದರು.</p>.<p>‘ಜಿಲ್ಲೆಯ ಎಲ್ಲ ಮತಗಟ್ಟೆಗಳಲ್ಲಿ ಮತದಾನ ಪ್ರಕ್ರಿಯೆ ಸುಗಮವಾಗಿ ನಡೆಸುವ ಉದ್ದೇಶದಿಂದ ಮೈಕ್ರೋ ಅಬ್ಸರ್ವರ್ಗಳನ್ನು ನೇಮಿಸಲಾಗಿದೆ. ಪ್ರತಿ ಮತಗಟ್ಟೆಯಲ್ಲಿ ವಿಡಿಯೊ ಚಿತ್ರೀಕರಣಕ್ಕೆ ಕ್ರಮ ವಹಿಸಲಾಗಿದೆ’ ಎಂದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಶಂಕರಪ್ಪ ವಣಕ್ಯಾಳ, ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ್ ಘಾಳಿ, ಚುನಾವಣಾ ತರಬೇತುದಾರ ಎನ್.ವಿ. ಶಿರಗಾಂವಕಾರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: ‘</strong>ವಿಧಾನಪರಿಷತ್ ಚುನಾವಣೆಯಲ್ಲಿ ಅರ್ಹ ಮತದಾರರಿಗೆ ಹಕ್ಕು ಚಲಾವಣೆ ಕುರಿತು ಸೂಕ್ತ ತರಬೇತಿಯನ್ನು ಕಡ್ಡಾಯವಾಗಿ ಹಮ್ಮಿಕೊಳ್ಳಬೇಕು’ ಎಂದು ಜಿಲ್ಲಾ ಚುನಾವಣಾಧಿಕಾರಿ ಆರ್. ವೆಂಕಟೇಶಕುಮಾರ್ ಸೂಚನೆ ನೀಡಿದರು.</p>.<p>ಇಲ್ಲಿ ಗುರುವಾರ ನಡೆದ ವಿಡಿಯೊ ಸಂವಾದದಲ್ಲಿ ಮಾತನಾಡಿ, ‘ಈ ಚುನಾವಣೆಯಲ್ಲಿ ಪ್ರಾಶಸ್ತ್ಯದ ಮತಗಳಿರುವುದರಿಂದ ಮತದಾನ ಪ್ರಕ್ರಿಯೆ ಭಿನ್ನವಾಗಿರುತ್ತದೆ. ಆದ್ದರಿಂದ ತರಬೇತಿ ಅಗತ್ಯವಿದೆ’ ಎಂದರು.</p>.<p>‘ಪ್ರಾಶಸ್ತ್ಯದ ಮತ ಇರುವುದರಿಂದ ಮತ ಚಲಾವಣೆಯಲ್ಲಿ ಯಾವುದೇ ಲೋಪಗಳಾದರೆ ಆ ಮತವನ್ನು ಅಸಿಂಧು ಅಥವಾ ತಿರಸ್ಕೃತ ಎಂದು ಪರಿಗಣಿಸಲಾಗುತ್ತದೆ. ಆದ್ದರಿಂದ ಈ ಬಗ್ಗೆ ಮತದಾರರಲ್ಲಿ ಅರಿವು ಮೂಡಿಸಬೇಕು ಮತ್ತು ಪ್ರಾಯೋಗಿಕವಾಗಿ ಮತಚಲಾವಣೆ ಬಗ್ಗೆ ತರಬೇತಿ ನೀಡಬೇಕು. ಈ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿ ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕ್ರಮ ವಹಿಸಬೇಕು’ ಎಂದು ತಿಳಿಸಿದರು.</p>.<p>‘ಜಿಲ್ಲೆಯ ಎಲ್ಲ ಮತಗಟ್ಟೆಗಳಲ್ಲಿ ಮತದಾನ ಪ್ರಕ್ರಿಯೆ ಸುಗಮವಾಗಿ ನಡೆಸುವ ಉದ್ದೇಶದಿಂದ ಮೈಕ್ರೋ ಅಬ್ಸರ್ವರ್ಗಳನ್ನು ನೇಮಿಸಲಾಗಿದೆ. ಪ್ರತಿ ಮತಗಟ್ಟೆಯಲ್ಲಿ ವಿಡಿಯೊ ಚಿತ್ರೀಕರಣಕ್ಕೆ ಕ್ರಮ ವಹಿಸಲಾಗಿದೆ’ ಎಂದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಶಂಕರಪ್ಪ ವಣಕ್ಯಾಳ, ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ್ ಘಾಳಿ, ಚುನಾವಣಾ ತರಬೇತುದಾರ ಎನ್.ವಿ. ಶಿರಗಾಂವಕಾರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>