‘ಬಸವರಾಜ ಹೊರಟ್ಟಿ ಕುರಿತಾಗಿ ಬರೆಯಲಾದ ‘ಬಸವರಾಜ ಪಥ’ ಹಾಗೂ ‘ಸಂಘರ್ಷ– ಹೋರಾಟ– ಸಾಧನೆ’ ಎಂಬ ಎರಡು ಪುಸ್ತಕಗಳಲ್ಲಿ ರಾಷ್ಟ್ರಲಾಂಛನ, ರಾಜ್ಯ ಲಾಂಛನ ಹಾಗೂ ವಿಧಾನ ಪರಿಷತ್ ಸಭಾಪತಿ ಪೀಠದ ಚಿತ್ರಗಳನ್ನು ಮುದ್ರಿಸಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ವ್ಯಕ್ತಿಯೊಬ್ಬರು ಶುಕ್ರವಾರ ದೂರು ನೀಡಿದ್ದಾರೆ. ಇದನ್ನು ಪರಿಶೀಲಿಸಲಾಗಿ ದುರ್ಬಳಕೆ ಮಾಡಿರುವುದು ಮೇಲ್ನೋಟಕ್ಕೆ ತಿಳಿದುಬಂದಿದೆ. ಇದರ ಬಗ್ಗೆ ವಿವರಣೆ ಕೊಡಬೇಕು ಎಂದು ಹೊರಟ್ಟಿ ಅವರಿಗೆ ನೋಟಿಸ್ ನೀಡಲಾಗಿದೆ’ ಎಂದು ಅವರು ‘ಪ್ರಜಾವಾಣಿ’ಗೆ ತಿಳಿಸಿದರು.