<p><strong>ಬೆಳಗಾವಿ</strong>: ‘ಅಣ್ಣ–ತಮ್ಮಂದಿರು (ಜಾರಕಿಹೊಳಿ ಸಹೋದರರು) ಕೊನೆಗೆ ಒಂದಾಗುತ್ತಾರೆ ಎಂಬ ಮನಸ್ಥಿತಿಯಿಂದ ಮತದಾರರು ಹೊರಬರಬೇಕು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು.</p>.<p>ವಿಧಾನಪರಿಷತ್ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಪರವಾಗಿ ರಾಯಬಾಗದಲ್ಲಿ ಭಾನುವಾರ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಈ ಸಹೋದರರೆಲ್ಲರೂ ಒಂದೇ ಎನ್ನುವ ನಿಮ್ಮ ಮನಸ್ಥಿತಿಗೆ ಜಗತ್ತಿನಲ್ಲಿ ಔಷಧಿ ಇಲ್ಲ; ಕಂಡು ಹಿಡಿಯುವುದಕ್ಕೂ ಆಗುವುದಿಲ್ಲ. ಇವರು ಈಗೇನು ಮತ್ತು ಕೊನೆಗೇನು ಮಾಡುತ್ತಾರೆ ಎಂದೇ ಚರ್ಚಿಸುತ್ತೀದ್ದೀರಿ. ನಾನು ಕಾಂಗ್ರೆಸ್ಗೆ ಮಾತ್ರವೇ ಕೆಲಸ ಮಾಡುತ್ತಿದ್ದೇನೆ’ ಎಂದು ಸ್ಪಷ್ಟಪಡಿಸಿದರು.</p>.<p>‘ಇಲ್ಲಿ ಕುಟುಂಬದ ಪ್ರಶ್ನೆ ಇಲ್ಲ. ಕಾಂಗ್ರೆಸ್–ಬಿಜೆಪಿ ನಡುವಿನ ಚುನಾವಣೆ. ಕುಟುಂಬ ನೋಡದೆ ನೀವು ಮತ ಚಲಾಯಿಸಿದರೆ, ನಾವು 4ಸಾವಿರ ಮತಗಳನ್ನು ಪಡೆದು ಗೆಲ್ಲುತ್ತೇವೆ. ಇಲ್ಲವಾದಲ್ಲಿ 3ಸಾವಿರಕ್ಕೆ ಇಳಿಯುತ್ತೇವೆ’ ಎಂದು ತಿಳಿಸಿದರು.</p>.<p>‘ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಅವರು (ರಮೇಶ ಹಾಗೂ ಲಖನ್ ಜಾರಕಿಹೊಳಿ) ನನ್ನನ್ನು ಮತದಾರರಿಗೆ ಹಣ ಹಂಚಿ ಸೋಲಿಸಿದ್ದಾರೆ. ನಾನು ಈಗ ಅವರನ್ನು ಗೆಲ್ಲಿಸುವ ಪ್ರಶ್ನೆಯೇ ಬರುವುದಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಅಣ್ಣ–ತಮ್ಮಂದಿರು (ಜಾರಕಿಹೊಳಿ ಸಹೋದರರು) ಕೊನೆಗೆ ಒಂದಾಗುತ್ತಾರೆ ಎಂಬ ಮನಸ್ಥಿತಿಯಿಂದ ಮತದಾರರು ಹೊರಬರಬೇಕು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು.</p>.<p>ವಿಧಾನಪರಿಷತ್ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಪರವಾಗಿ ರಾಯಬಾಗದಲ್ಲಿ ಭಾನುವಾರ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಈ ಸಹೋದರರೆಲ್ಲರೂ ಒಂದೇ ಎನ್ನುವ ನಿಮ್ಮ ಮನಸ್ಥಿತಿಗೆ ಜಗತ್ತಿನಲ್ಲಿ ಔಷಧಿ ಇಲ್ಲ; ಕಂಡು ಹಿಡಿಯುವುದಕ್ಕೂ ಆಗುವುದಿಲ್ಲ. ಇವರು ಈಗೇನು ಮತ್ತು ಕೊನೆಗೇನು ಮಾಡುತ್ತಾರೆ ಎಂದೇ ಚರ್ಚಿಸುತ್ತೀದ್ದೀರಿ. ನಾನು ಕಾಂಗ್ರೆಸ್ಗೆ ಮಾತ್ರವೇ ಕೆಲಸ ಮಾಡುತ್ತಿದ್ದೇನೆ’ ಎಂದು ಸ್ಪಷ್ಟಪಡಿಸಿದರು.</p>.<p>‘ಇಲ್ಲಿ ಕುಟುಂಬದ ಪ್ರಶ್ನೆ ಇಲ್ಲ. ಕಾಂಗ್ರೆಸ್–ಬಿಜೆಪಿ ನಡುವಿನ ಚುನಾವಣೆ. ಕುಟುಂಬ ನೋಡದೆ ನೀವು ಮತ ಚಲಾಯಿಸಿದರೆ, ನಾವು 4ಸಾವಿರ ಮತಗಳನ್ನು ಪಡೆದು ಗೆಲ್ಲುತ್ತೇವೆ. ಇಲ್ಲವಾದಲ್ಲಿ 3ಸಾವಿರಕ್ಕೆ ಇಳಿಯುತ್ತೇವೆ’ ಎಂದು ತಿಳಿಸಿದರು.</p>.<p>‘ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಅವರು (ರಮೇಶ ಹಾಗೂ ಲಖನ್ ಜಾರಕಿಹೊಳಿ) ನನ್ನನ್ನು ಮತದಾರರಿಗೆ ಹಣ ಹಂಚಿ ಸೋಲಿಸಿದ್ದಾರೆ. ನಾನು ಈಗ ಅವರನ್ನು ಗೆಲ್ಲಿಸುವ ಪ್ರಶ್ನೆಯೇ ಬರುವುದಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>