ಜೀಪ್ನಲ್ಲಿ ಮೆರವಣಿಗೆಯಲ್ಲಿ ಬಂದ ಕಾಂಗ್ರೆಸ್ ಅಭ್ಯರ್ಥಿ ಜೊತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಇದ್ದರು. ಬಿಜೆಪಿ ಅಭ್ಯರ್ಥಿಯೊಂದಿಗೆ ಗೋಕಾಕದ ಶಾಸಕ ರಮೇಶ ಜಾರಕಿಹೊಳಿ ಹೆಜ್ಜೆ ಹಾಕಿದರು. ಪಕ್ಷೇತರ ಲಖನ್ ಜೊತೆ ರಮೇಶ ಅವರ ಪುತ್ರ ಕೆಎಂಎಫ್ ನಿರ್ದೇಶಕರೂ ಆಗಿರುವ ಅಮರನಾಥ್ ಜಾರಕಿಹೊಳಿ, ಅಳಿಯ ಅಂಬಿರಾವ್ ಪಾಟೀಲ ಮತ್ತು ಆಪ್ತರು ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಸಹೋದರರ ಸವಾಲ್ನಂತೆಯೂ ಇತ್ತು.