ರಾಜಾ ಲಖಮಗೌಡ ವಿಜ್ಞಾನ ಕಾಲೇಜಿನ ಪ್ರಾಚಾರ್ಯ ಡಾ.ವಿ.ಡಿ. ಯಳಮಲಿ ಮಾತನಾಡಿ, ‘ಮಾತುಗಳನ್ನು ಅರ್ಥೈಸಿಕೊಳ್ಳುವುದು ಒಂದು ಕಲೆ. ಪ್ರಚಲಿತ ವಿಷಯಗಳನ್ನು ಪ್ರಬುದ್ಧವಾಗಿ ಮಂಡಿಸುವ ಕಲೆ ಬೆಳೆಸಿಕೊಳ್ಳಬೇಕು. ಒಂದೇ ವಿಷಯವನ್ನು ತರ್ಕಬದ್ಧವಾಗಿ ಮಂಡಿಸಬೇಕು ಮತ್ತು ವಿವಿಧ ಪರಿಕಲ್ಪನೆಗಳ ಮೂಲಕ ವ್ಯಕ್ತಪಡಿಸಬೇಕು. ವಿಷಯಗಳನ್ನು ನಿಖರವಾಗಿ ಆಳಕ್ಕೆ ಹೋಗಿ ಮಾತನಾಡುವುದನ್ನು ರೂಢಿಸಿಕೊಳ್ಳಬೇಕು. ಕೌಶಲ ಪಡೆಯುವದಕ್ಕೆ ಪರಿಶ್ರಮ ಬೇಕಾಗುತ್ತದೆ. ಆಗ, ಮಾತ್ರ ವ್ಯವಸ್ಥಿತವಾಗಿ ಮಾತನಾಡುವ ಕಲೆ ಸಿದ್ಧಿಯಾಗುತ್ತದೆ’ ಎಂದು ತಿಳಿಸಿದರು.