ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೊಬೈಲ್ ದಾಸರಾಗಬೇಡಿ, ಕ್ರೀಡೆಯಲ್ಲಿ ತೊಡಗಿ: ಚನ್ನರಾಜ ಹಟ್ಟಿಹೊಳಿ

Last Updated 14 ನವೆಂಬರ್ 2020, 15:34 IST
ಅಕ್ಷರ ಗಾತ್ರ

ಬೆಳಗಾವಿ: ‘ಯುವಕರು ಮೊಬೈಲ್, ಕಂಪ್ಯೂಟರ್, ಸಾಮಾಜಿಕ ಜಾಲತಾಣಗಳಿಗೆ ಅಂಟಿಕೊಳ್ಳದೆ, ಕ್ರೀಡೆಯಲ್ಲೂ ತೊಡಗುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು’ ಎಂದು ಕಾಂಗ್ರೆಸ್ ಮುಖಂಡ, ಹರ್ಷ ಶುಗರ್ಸ್ ವ್ಯವಸ್ಥಾಪಕ ನಿರ್ದೇಶಕ ಚನ್ನರಾಜ ಹಟ್ಟಿಹೊಳಿ ಸಲಹೆ ನೀಡಿದರು.

ತಾಲ್ಲೂಕಿನ ಮೊದಗಾ ಗ್ರಾಮದಲ್ಲಿ ಶನಿವಾರ ಆಯೋಜಿಸಿದ್ದ ‘ಮೋದಗಾ ಪ್ರೀಮಿಯರ್ ಲೀಗ್’ ಕ್ರಿಕೆಟ್ ಟೂರ್ನಿ ಉದ್ಘಾಟಿಸಿ ಅವರು ಮಾತನಾಡಿದರು.

‘ದೇಹ ದಂಡಿಸುವ ಅಥವಾ ವ್ಯಾಯಾಮ ನೀಡುವಂತಹ ಯಾವುದೇ ಕ್ರೀಡೆಗಳನ್ನು ಮಕ್ಕಳು, ಯುವಕರು ಇಂದಿನ ದಿನಗಳಲ್ಲಿ ಹೆಚ್ಚಾಗಿ ಆಡುತ್ತಿಲ್ಲ. ಸದೃಢವಾದ ದೇಹಕ್ಕಾಗಿ ಕ್ರಿಕೆಟ್, ಕಬಡ್ಡಿ, ವಾಲಿಬಾಲ್, ಫುಟ್ಬಾಲ್‌ ಮುಂತಾದ ಆಟಗಳನ್ನು ಆಡಬೇಕು. ಯುವಕರು ಸಾಮಾಜಿಕ ಹಾಗೂ ರಾಜಕೀಯವಾಗಿ ಜಾಗ್ರತರಾಗಬೇಕು. ನಮ್ಮ ಗ್ರಾಮ, ಸಮಾಜಕ್ಕೆ ಏನು ಬೇಕು ಎನ್ನುವುದನ್ನು ಗಟ್ಟಿಯಾಗಿ ಮಂಡಿಸುವ ಮನೋಭಾವ ಬೆಳೆಸಿಕೊಳ್ಳಬೇಕು’ ಎಂದರು.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಗಂಗಣ್ಣ ಕಲ್ಲೂರ, ಮುಖಂಡರಾದ ಕೇಸರಖಾನ್ ಮುಲ್ಲಾ, ಯಲ್ಲಪ್ಪ ಮುಗಳಿ, ಬಾಬು ಕಾಳೆ, ಪ್ರಕಾಶ ದಾನೋಜಿ, ಕಲ್ಲಪ್ಪ ಕಮ್ಮಾರ, ಬಸವರಾಜ ಕಲ್ಲೂರ, ಟೂರ್ನಿ ಆಯೋಜಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT