<p><strong>ರಾಯಬಾಗ</strong>: ಅನಾದಿ ಕಾಲದಿಂದ ನಮ್ಮ ಪೂರ್ವಜರು ಸತ್ಕಾರ್ಯಗಳ ಮೂಲಕ ಧರ್ಮಾಚರಣೆಗಳನ್ನು ಭಯ ಭಕ್ತಿಯಿಂದ ಚರಿಸಿಕೊಂಡು ಬಂದಿದ್ದಾರೆ. ಅಂತಹ ಧರ್ಮಾಚರಣೆಗಳನ್ನು ನಾವು ಮುಂದುವರೆಸಿಕೊಂಡು ಹೋಗಬೇಕಾಗಿದೆ. ಮಠ-ಮಂದಿರಗಳು ಮಾನವನ ಬದುಕಿಗೆ ಕಣ್ಣು ಇದ್ದಂತೆ ಎಂದು ಲೇಖಕ ಪ್ರಣಯ ಪಾಟೀಲ ಹೇಳಿದರು.</p>.<p>ತಾಲ್ಲೂಕಿನ ರೈಲ್ವೇ ಸ್ಟೇಷನ್ನಲ್ಲಿರುವ ಲಕ್ಷ್ಮೀದೇವಿ ದೇವಸ್ಥಾನಕ್ಕೆ ನಿರ್ಮಿಸಿರುವ ನೂತನ ಮಹಾದ್ವಾರವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.</p>.<p>ದೈವಭಕ್ತಿಯನ್ನು ಆರಾಧಿಸುವ ಪರಂಪರೆ ನಮ್ಮದಾಗಬೇಕು. ಸಾಮಾಜಿಕವಾಗಿ, ಕೌಟುಂಬಿಕವಾಗಿ ಎದುರಾಗುವ ಸಮಸ್ಯೆಗಳ ನಿವಾರಣೆಗೆ ದೇವರ ಹಾಗೂ ದೇವಾಲಯಗಳ ಅವಶ್ಯಕತೆ ನಮಗಿದೆ. ಸಮಾಜದಲ್ಲಿ ನಾವು ಕೆಡಕನ್ನು ಮಾಡದೇ ಒಳ್ಳೆಯ ಕೆಲಸಗಳನ್ನು ಮಾಡಲು ಮಠ-ಮಂದಿರಗಳು ಮಾರ್ಗದರ್ಶನ ನೀಡುತ್ತವೆ. ದೇವಸ್ಥಾನಗಳಿಗೆ ಕಳಸ ಎಷ್ಟು ಭಕ್ತಿಯ ಪ್ರಾಮುಖ್ಯತೆ ಹೊಂದಿದೆಯೊ ಅದೇ ರೀತಿ ನಾವು ಮತ್ತು ಸಮಾಜ ಒಳ್ಳೆಯ ದಾರಿಯಲ್ಲಿ ನಡೆದರೆ ಮಾನವನಿಗೆ ಅದೇ ಭೂಷಣ ಎಂದು ಹೇಳಿದರು.</p>.<p>ವಕೀಲ ರಾಯಪ್ಪ ಗೊಂಡೆ, ಮರೆಪ್ಪ ದೀಪಾಳೆ, ಗುಣಪಾಲ ಬಡೋರೆ, ರಮೇಶ ಕುಂಬಾರ, ಸಂಜು ಬಾವಚೆ,ಸಂತೋಷ ತೇರದಾಳೆ,ಮಹಾವೀರ ಶೆಟ್ಟಿ,ಸಂತೋಷ ಶೆಟ್ಟಿ, ಕುಮಾರ ಹೊಸಕೋಟೆ, ಬೀರಪ್ಪ ಘೇನಾನಿ, ಬೀರಪ್ಪ ಗೊಂಡೆ,ಅಣ್ಣಪ್ಪ ಮುಧೋಳೆ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಬಾಗ</strong>: ಅನಾದಿ ಕಾಲದಿಂದ ನಮ್ಮ ಪೂರ್ವಜರು ಸತ್ಕಾರ್ಯಗಳ ಮೂಲಕ ಧರ್ಮಾಚರಣೆಗಳನ್ನು ಭಯ ಭಕ್ತಿಯಿಂದ ಚರಿಸಿಕೊಂಡು ಬಂದಿದ್ದಾರೆ. ಅಂತಹ ಧರ್ಮಾಚರಣೆಗಳನ್ನು ನಾವು ಮುಂದುವರೆಸಿಕೊಂಡು ಹೋಗಬೇಕಾಗಿದೆ. ಮಠ-ಮಂದಿರಗಳು ಮಾನವನ ಬದುಕಿಗೆ ಕಣ್ಣು ಇದ್ದಂತೆ ಎಂದು ಲೇಖಕ ಪ್ರಣಯ ಪಾಟೀಲ ಹೇಳಿದರು.</p>.<p>ತಾಲ್ಲೂಕಿನ ರೈಲ್ವೇ ಸ್ಟೇಷನ್ನಲ್ಲಿರುವ ಲಕ್ಷ್ಮೀದೇವಿ ದೇವಸ್ಥಾನಕ್ಕೆ ನಿರ್ಮಿಸಿರುವ ನೂತನ ಮಹಾದ್ವಾರವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.</p>.<p>ದೈವಭಕ್ತಿಯನ್ನು ಆರಾಧಿಸುವ ಪರಂಪರೆ ನಮ್ಮದಾಗಬೇಕು. ಸಾಮಾಜಿಕವಾಗಿ, ಕೌಟುಂಬಿಕವಾಗಿ ಎದುರಾಗುವ ಸಮಸ್ಯೆಗಳ ನಿವಾರಣೆಗೆ ದೇವರ ಹಾಗೂ ದೇವಾಲಯಗಳ ಅವಶ್ಯಕತೆ ನಮಗಿದೆ. ಸಮಾಜದಲ್ಲಿ ನಾವು ಕೆಡಕನ್ನು ಮಾಡದೇ ಒಳ್ಳೆಯ ಕೆಲಸಗಳನ್ನು ಮಾಡಲು ಮಠ-ಮಂದಿರಗಳು ಮಾರ್ಗದರ್ಶನ ನೀಡುತ್ತವೆ. ದೇವಸ್ಥಾನಗಳಿಗೆ ಕಳಸ ಎಷ್ಟು ಭಕ್ತಿಯ ಪ್ರಾಮುಖ್ಯತೆ ಹೊಂದಿದೆಯೊ ಅದೇ ರೀತಿ ನಾವು ಮತ್ತು ಸಮಾಜ ಒಳ್ಳೆಯ ದಾರಿಯಲ್ಲಿ ನಡೆದರೆ ಮಾನವನಿಗೆ ಅದೇ ಭೂಷಣ ಎಂದು ಹೇಳಿದರು.</p>.<p>ವಕೀಲ ರಾಯಪ್ಪ ಗೊಂಡೆ, ಮರೆಪ್ಪ ದೀಪಾಳೆ, ಗುಣಪಾಲ ಬಡೋರೆ, ರಮೇಶ ಕುಂಬಾರ, ಸಂಜು ಬಾವಚೆ,ಸಂತೋಷ ತೇರದಾಳೆ,ಮಹಾವೀರ ಶೆಟ್ಟಿ,ಸಂತೋಷ ಶೆಟ್ಟಿ, ಕುಮಾರ ಹೊಸಕೋಟೆ, ಬೀರಪ್ಪ ಘೇನಾನಿ, ಬೀರಪ್ಪ ಗೊಂಡೆ,ಅಣ್ಣಪ್ಪ ಮುಧೋಳೆ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>