<p>ಮೂಡಲಗಿ: ‘ಪ್ರಧಾನಮಂತ್ರಿ ಗ್ರಾಮೀಣ ಸಡಕ ಯೋಜನೆ ಅಡಿಯಲ್ಲಿ ಅರಭಾವಿ ಕ್ಷೇತ್ರದ ಮೂರು ಹೊಸ ರಸ್ತೆ ಕಾಮಗಾರಿಗಳಿಗಾಗಿ ₹7.88 ಕೋಟಿ ಅನುದಾನ ಮಂಜೂರಾಗಿದೆ’ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಶೀಘ್ರದಲ್ಲಿಯೇ ರಸ್ತೆ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಗುವುದು. ಅರಭಾವಿ- ಸಂಗನಕೇರಿಯಿಂದ ಫಾರ್ಮಮಡ್ಡಿಯವರೆಗಿನ 2.1 ಕಿ.ಮೀ ರಸ್ತೆ ಕಾಮಗಾರಿಗೆ ₹1.60 ಕೋಟಿ, ಶಿವಾಪುರ(ಹ) ದಿಂದ ಮಹಾಲಿಂಗಪುರ ವರೆಗಿನ 3.48 ಕಿ.ಮೀ. ರಸ್ತೆ ಕಾಮಗಾರಿಗೆ ₹3.16 ಕೋಟಿ ಮತ್ತು ರಾಜಾಪುರದಿಂದ ಕಲ್ಲೊಳ್ಳಿ ವರೆಗಿನ 5.11 ಕಿ.ಮೀ. ರಸ್ತೆ ಕಾಮಗಾರಿಗೆ ₹3.12 ಕೋಟಿ ರೂಪಾಯಿ ಅನುದಾನ ಮಂಜೂರಾಗಿದೆ ಎಂದು ತಿಳಿಸಿದ್ದಾರೆ.</p>.<p>ಅರಭಾವಿ ಕ್ಷೇತ್ರದಲ್ಲಿ ರಸ್ತೆಗಳ ಸುಧಾರಣೆಗಾಗಿ ಸರ್ಕಾರದಿಂದ ಅನುದಾನ ಮಂಜೂರಾತಿ ನೀಡಲು ನನ್ನೊಂದಿಗೆ ಕೈ ಜೋಡಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿಯವರ ಕಾರ್ಯಕ್ಕೆ ಅಭಿನಂದಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260428-21-308188685</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೂಡಲಗಿ: ‘ಪ್ರಧಾನಮಂತ್ರಿ ಗ್ರಾಮೀಣ ಸಡಕ ಯೋಜನೆ ಅಡಿಯಲ್ಲಿ ಅರಭಾವಿ ಕ್ಷೇತ್ರದ ಮೂರು ಹೊಸ ರಸ್ತೆ ಕಾಮಗಾರಿಗಳಿಗಾಗಿ ₹7.88 ಕೋಟಿ ಅನುದಾನ ಮಂಜೂರಾಗಿದೆ’ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಶೀಘ್ರದಲ್ಲಿಯೇ ರಸ್ತೆ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಗುವುದು. ಅರಭಾವಿ- ಸಂಗನಕೇರಿಯಿಂದ ಫಾರ್ಮಮಡ್ಡಿಯವರೆಗಿನ 2.1 ಕಿ.ಮೀ ರಸ್ತೆ ಕಾಮಗಾರಿಗೆ ₹1.60 ಕೋಟಿ, ಶಿವಾಪುರ(ಹ) ದಿಂದ ಮಹಾಲಿಂಗಪುರ ವರೆಗಿನ 3.48 ಕಿ.ಮೀ. ರಸ್ತೆ ಕಾಮಗಾರಿಗೆ ₹3.16 ಕೋಟಿ ಮತ್ತು ರಾಜಾಪುರದಿಂದ ಕಲ್ಲೊಳ್ಳಿ ವರೆಗಿನ 5.11 ಕಿ.ಮೀ. ರಸ್ತೆ ಕಾಮಗಾರಿಗೆ ₹3.12 ಕೋಟಿ ರೂಪಾಯಿ ಅನುದಾನ ಮಂಜೂರಾಗಿದೆ ಎಂದು ತಿಳಿಸಿದ್ದಾರೆ.</p>.<p>ಅರಭಾವಿ ಕ್ಷೇತ್ರದಲ್ಲಿ ರಸ್ತೆಗಳ ಸುಧಾರಣೆಗಾಗಿ ಸರ್ಕಾರದಿಂದ ಅನುದಾನ ಮಂಜೂರಾತಿ ನೀಡಲು ನನ್ನೊಂದಿಗೆ ಕೈ ಜೋಡಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿಯವರ ಕಾರ್ಯಕ್ಕೆ ಅಭಿನಂದಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260428-21-308188685</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>