‘ವಿಶ್ವವಿದ್ಯಾಲಯದ ಕುಲಪತಿಯ ಅಧಿಕಾರ ಅವಧಿ ಎರಡು ತಿಂಗಳಿಗಿಂತ ಕಡಿಮೆ ಇದ್ದರೆ, ಅವರು ಯಾವುದೇ ಮಹತ್ವದ ನಿರ್ಧಾರ ಕೈಗೊಳ್ಳಬಾರದು ಮತ್ತು ಹಣಕಾಸು ವ್ಯವಹಾರ ನಡೆಸಬಾರದು ಎಂಬುದು ಸರ್ಕಾರದ ನಿಯಮ. ಈ ಬಗ್ಗೆ ರಾಜ್ಯಪಾಲರ ಸುತ್ತೋಲೆ ಕೂಡ ಇದೆ. ಆದರೆ, ವಿಟಿಯು ಹಾಲಿ ಕುಲಪತಿ ಪ್ರೊ.ಕರಿಸಿದ್ಧಪ್ಪ ಅವರ ಅವಧಿ ಸೆ. 30ಕ್ಕೆ ಕೊನೆಗೊಳ್ಳಲಿದೆ. ಆದರೂ ಅವರು ವಿವಿಧ ಕಾಮಗಾರಿಗಳಿಗೆಂದು ₹ 35 ಕೋಟಿ ಬಿಲ್ ಪಾವತಿ ಮಾಡಿದ್ದಾರೆ. ಕುಲಸಚಿವ ಆನಂದ ದೇಶಪಾಂಡೆ ಅವರು ಎಲ್ಲ ಚೆಕ್ಗಳಿಗೂ ಸಹಿ ಹಾಕಿದ್ದಾರೆ. ಇದರಲ್ಲಿ ಅಕ್ರಮ ನಡೆದಿದ್ದು, ತನಿಖೆ ಮಾಡಬೇಕಾಗಿ ಲೋಕಾಯುಕ್ತಕ್ಕೆ ದೂರು ನೀಡಿದ್ದೇನೆ’ ಎಂದು ವಕೀಲ ರಾಮಕೃಷ್ಣ ತಿಳಿಸಿದ್ದಾರೆ.