ಬೆಳಗಾವಿ: ‘ಟೈಲರ್ ಕೆಲಸ ಮಾಡುವ ಕಾರ್ಮಿಕರಿಗೆ ₹5ಸಾವಿರ ಸಹಾಯಧನವನ್ನು ಕಾರ್ಮಿಕ ಇಲಾಖೆಯಿಂದ ನೀಡಲಾಗುತ್ತಿದೆ ಎಂಬ ಸುಳ್ಳು ಸುದ್ದಿ ನಂಬಿಕೊಂಡು ಸಾವಿರಾರು ಜನರು ಇಲ್ಲಿನ ಕಾರ್ಮಿಕ ಭವನಕ್ಕೆ ಗುಂಪು ಕಟ್ಟಿಕೊಂಡು ಬಂದು ಜಮಾಯಿಸುತ್ತಿದ್ದಾರೆ. ಸಹಾಯಧನ ನೀಡಲು ಕಾರ್ಮಿಕ ಇಲಾಖೆಯಿಂದ ಯಾವುದೇ ಅರ್ಜಿ ಅಹ್ವಾನಿಸಿಲ್ಲ’ ಎಂದು ಉಪ ಕಾರ್ಮಿಕ ಆಯುಕ್ತ ವೆಂಕಟೇಶ ಶಿಂದಿಹಟ್ಟಿ ಸ್ಪಷ್ಟಪಡಿಸಿದ್ದಾರೆ.