<p><strong>ಬೆಳಗಾವಿ:</strong> ‘ನಗರದ ನಿವಾಸಿಗಳಿಗೆ ಸಮರ್ಪಕ ಕುಡಿಯುವ ನೀರು ಪೂರೈಸಲು ಹಿಡಕಲ್ ಜಲಾಶಯದಿಂದ ಹೆಚ್ಚಿನ ನೀರು ಎತ್ತಲು ತೀರ್ಮಾನಿಸಲಾಗಿದೆ. ಪ್ರಸ್ತುತ 12 ಎಂಜಿಡಿ ( ದಿನವೊಂದಕ್ಕೆ ದಶಲಕ್ಷ ಗ್ಯಾಲನ್) ನೀರು ಪಡೆಯಲಾಗುತ್ತಿದ್ದು, ಇದನ್ನು 18 ಎಂಜಿಡಿಗೆ ಹೆಚ್ಚಿಸಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.</p>.<p>ನಗರದಲ್ಲಿ ಮಂಗಳವಾರ ಸ್ಮಾರ್ಟ್ ಸಿಟಿ ಯೋಜನೆಯ ಪ್ರಗತಿ ಪರಿಶೀಲಿಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದರು.</p>.<p>‘ಮುಂಗಾರು ಮಳೆ ಆರಂಭ ವಿಳಂಬವಾಗಿದ್ದರೂ, ಬೆಳಗಾವಿಗೆ ಕುಡಿಯುವ ನೀರಿನ ಕೊರತೆಯಿಲ್ಲ. ನಗರಕ್ಕೆ ಪ್ರಮುಖವಾಗಿ ಹಿಡಕಲ್ ಜಲಾಶಯ ಹಾಗೂ ರಕ್ಕಸಕೊಪ್ಪ ಜಲಾಶಯದಿಂದ ನೀರು ಪೂರೈಸಲಾಗುತ್ತಿತ್ತು. ಈಗ ರಕ್ಕಸಕೊಪ್ಪ ಜಲಾಶಯದಲ್ಲಿ ನೀರು ಕಡಿಮೆಯಾಗಿದೆ. ಹೀಗಾಗಿ, ಈ ಕೊರತೆಯನ್ನು ಹಿಡಕಲ್ ಜಲಾಶಯದಿಂದ ತುಂಬಿಕೊಳ್ಳಲು ತೀರ್ಮಾನಿಸಲಾಗಿದೆ’ ಎಂದು ತಿಳಿಸಿದರು.</p>.<p>‘ನೀರು ಇದ್ದರೂ, ನಗರದ ಎಲ್ಲ ಪ್ರದೇಶಗಳಿಗೆ ಪೂರೈಸಲು ಸಾಧ್ಯವಾಗುತ್ತಿಲ್ಲ. ಅದಕ್ಕಾಗಿ 24x7 ನಿರಂತರ ಕುಡಿಯುವ ನೀರು ಯೋಜನೆಯಡಿ ಎಲ್ಲೆಡೆ ನೀರು ಪೂರೈಸಲು ಕ್ರಮಕೈಗೊಳ್ಳಲಾಗುವುದು. ಪ್ರಸ್ತುತ ನಗರದ 10 ವಾರ್ಡ್ಗಳಲ್ಲಿ ಮಾತ್ರ ಈ ಯೋಜನೆಯಿದ್ದು, ಇನ್ನುಳಿದ ಎಲ್ಲ ವಾರ್ಡ್ಗಳಿಗೂ ವಿಸ್ತರಿಸಲಾಗುವುದು. ಸುಮಾರು 430 ಕೋಟಿ ವೆಚ್ಚದಲ್ಲಿ ವಿಸ್ತರಣೆ ಯೋಜನೆಗೆ ರಾಜ್ಯ ಸರ್ಕಾರ ಈಗಾಗಲೇ ಒಪ್ಪಿಗೆ ನೀಡಿದೆ. ಟೆಂಡರ್ ಪ್ರಕ್ರಿಯೆ ಕೂಡ ಮುಗಿದಿದೆ. ಸದ್ಯದಲ್ಲಿಯೇ ಕೆಲಸ ಪ್ರಾರಂಭಗೊಳ್ಳಲಿದೆ’ ಎಂದು ಹೇಳಿದರು.</p>.<p>‘ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳು ಆರಂಭವಾಗಿ, ಎರಡೂವರೆ ವರ್ಷಗಳು ಕಳೆದಿವೆ. ಸುಮಾರು ಶೇ 60ರಷ್ಟು ಕಾಮಗಾರಿಗಳು ಮುಗಿದಿವೆ. ಇನ್ನುಳಿದ ಕಾಮಗಾರಿಗಳನ್ನು ಮುಂಬರುವ ಎರಡೂವರೆ ವರ್ಷಗಳ ಅವಧಿಯಲ್ಲಿ ಪೂರ್ಣಗೊಳಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ನಗರದ ನಿವಾಸಿಗಳಿಗೆ ಸಮರ್ಪಕ ಕುಡಿಯುವ ನೀರು ಪೂರೈಸಲು ಹಿಡಕಲ್ ಜಲಾಶಯದಿಂದ ಹೆಚ್ಚಿನ ನೀರು ಎತ್ತಲು ತೀರ್ಮಾನಿಸಲಾಗಿದೆ. ಪ್ರಸ್ತುತ 12 ಎಂಜಿಡಿ ( ದಿನವೊಂದಕ್ಕೆ ದಶಲಕ್ಷ ಗ್ಯಾಲನ್) ನೀರು ಪಡೆಯಲಾಗುತ್ತಿದ್ದು, ಇದನ್ನು 18 ಎಂಜಿಡಿಗೆ ಹೆಚ್ಚಿಸಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.</p>.<p>ನಗರದಲ್ಲಿ ಮಂಗಳವಾರ ಸ್ಮಾರ್ಟ್ ಸಿಟಿ ಯೋಜನೆಯ ಪ್ರಗತಿ ಪರಿಶೀಲಿಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದರು.</p>.<p>‘ಮುಂಗಾರು ಮಳೆ ಆರಂಭ ವಿಳಂಬವಾಗಿದ್ದರೂ, ಬೆಳಗಾವಿಗೆ ಕುಡಿಯುವ ನೀರಿನ ಕೊರತೆಯಿಲ್ಲ. ನಗರಕ್ಕೆ ಪ್ರಮುಖವಾಗಿ ಹಿಡಕಲ್ ಜಲಾಶಯ ಹಾಗೂ ರಕ್ಕಸಕೊಪ್ಪ ಜಲಾಶಯದಿಂದ ನೀರು ಪೂರೈಸಲಾಗುತ್ತಿತ್ತು. ಈಗ ರಕ್ಕಸಕೊಪ್ಪ ಜಲಾಶಯದಲ್ಲಿ ನೀರು ಕಡಿಮೆಯಾಗಿದೆ. ಹೀಗಾಗಿ, ಈ ಕೊರತೆಯನ್ನು ಹಿಡಕಲ್ ಜಲಾಶಯದಿಂದ ತುಂಬಿಕೊಳ್ಳಲು ತೀರ್ಮಾನಿಸಲಾಗಿದೆ’ ಎಂದು ತಿಳಿಸಿದರು.</p>.<p>‘ನೀರು ಇದ್ದರೂ, ನಗರದ ಎಲ್ಲ ಪ್ರದೇಶಗಳಿಗೆ ಪೂರೈಸಲು ಸಾಧ್ಯವಾಗುತ್ತಿಲ್ಲ. ಅದಕ್ಕಾಗಿ 24x7 ನಿರಂತರ ಕುಡಿಯುವ ನೀರು ಯೋಜನೆಯಡಿ ಎಲ್ಲೆಡೆ ನೀರು ಪೂರೈಸಲು ಕ್ರಮಕೈಗೊಳ್ಳಲಾಗುವುದು. ಪ್ರಸ್ತುತ ನಗರದ 10 ವಾರ್ಡ್ಗಳಲ್ಲಿ ಮಾತ್ರ ಈ ಯೋಜನೆಯಿದ್ದು, ಇನ್ನುಳಿದ ಎಲ್ಲ ವಾರ್ಡ್ಗಳಿಗೂ ವಿಸ್ತರಿಸಲಾಗುವುದು. ಸುಮಾರು 430 ಕೋಟಿ ವೆಚ್ಚದಲ್ಲಿ ವಿಸ್ತರಣೆ ಯೋಜನೆಗೆ ರಾಜ್ಯ ಸರ್ಕಾರ ಈಗಾಗಲೇ ಒಪ್ಪಿಗೆ ನೀಡಿದೆ. ಟೆಂಡರ್ ಪ್ರಕ್ರಿಯೆ ಕೂಡ ಮುಗಿದಿದೆ. ಸದ್ಯದಲ್ಲಿಯೇ ಕೆಲಸ ಪ್ರಾರಂಭಗೊಳ್ಳಲಿದೆ’ ಎಂದು ಹೇಳಿದರು.</p>.<p>‘ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳು ಆರಂಭವಾಗಿ, ಎರಡೂವರೆ ವರ್ಷಗಳು ಕಳೆದಿವೆ. ಸುಮಾರು ಶೇ 60ರಷ್ಟು ಕಾಮಗಾರಿಗಳು ಮುಗಿದಿವೆ. ಇನ್ನುಳಿದ ಕಾಮಗಾರಿಗಳನ್ನು ಮುಂಬರುವ ಎರಡೂವರೆ ವರ್ಷಗಳ ಅವಧಿಯಲ್ಲಿ ಪೂರ್ಣಗೊಳಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>