<p><strong>ರಾಮದುರ್ಗ</strong>: ಕುರಿ ಕಾಯುವ ಕಾಯಕದೊಂದಿಗೆ ರಾಮದುರ್ಗ ತಾಲ್ಲೂಕಿನ ಜಮೀನುಗಳಿಗೆ ಆಗಮಿಸಿದ್ದ ಮಹಿಳೆಯೊಬ್ಬಳು ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಟಕೋಳ ಠಾಣಾ ವ್ಯಾಪ್ತಿಯ ಸಿದ್ನಾಳ ಗ್ರಾಮದಲ್ಲಿ ಮಧ್ಯಾಹ್ನ ಜರುಗಿದೆ.</p>.<p>ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಕಟಕೋಳ ಪೊಲೀಸರು ತಾಯಿ ಮತ್ತು ಒಂದು ಮಗುವಿನ ಶವಗಳನ್ನು ಹೊರತೆಗೆದಿದ್ದಾರೆ. ಬೆಳಗಾವಿಯಿಂದ ಸೋಕೊ ಟೀಮಿನ ಈಜು ತಜ್ಞರು ಇನ್ನೊಂದು ಮಗುವಿನ ಶವಕ್ಕಾಗಿ ತೀವ್ರ ಶೋಧ ನಡೆಸಿದ್ದಾರೆ.</p>.<p>ಮೃತ ಮಹಿಳೆಯನ್ನು ಗೋಕಾಕ ತಾಲ್ಲೂಕಿನ ಬೆನಚಿನಮರಡಿ ಗ್ರಾಮದ ಲಕ್ಷ್ಮೀ ಮಲ್ಲಿಕಾರ್ಜುನ ಗೌಡವ್ವಗೋಳ (24), ಹಾಲವ್ವ (3) ಮತ್ತು ಹಾಲಪ್ಪ (1) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.</p>.<p>ಗಂಡನ ಮನೆಯವರು ಮತ್ತು ತವರು ಮನೆಯವರು ಕುರಿ ಮೇಯಿಸಿಕೊಂಡು ರಾಮದುರ್ಗ ತಾಲ್ಲೂಕಿನ ಬೇರೆ ಬೇರೆ ಗ್ರಾಮಗಳಲ್ಲಿ ವಾಸಿಸುತ್ತಿದ್ದರು. ಮೈಯಲ್ಲಿ ಹುಷಾರಿಲ್ಲ ಎಂದು ಲಕ್ಷ್ಮೀ ಬೆನಚಿನಮರಡಿಗೆ ಹೋಗಿದ್ದಳು. ಸಿದ್ನಾಳಕ್ಕೆ ಆಗಮಿಸಿ ಮಂಗಳವಾರ ಮಧ್ಯಾಹ್ನ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಕಟಕೋಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಪಿಐ ವಿನಾಯಕ ಬಡಿಗೇರ, ಪಿಎಸ್ಐ ಬಸವರಾಜ ಕೊಣ್ಣೂರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮದುರ್ಗ</strong>: ಕುರಿ ಕಾಯುವ ಕಾಯಕದೊಂದಿಗೆ ರಾಮದುರ್ಗ ತಾಲ್ಲೂಕಿನ ಜಮೀನುಗಳಿಗೆ ಆಗಮಿಸಿದ್ದ ಮಹಿಳೆಯೊಬ್ಬಳು ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಟಕೋಳ ಠಾಣಾ ವ್ಯಾಪ್ತಿಯ ಸಿದ್ನಾಳ ಗ್ರಾಮದಲ್ಲಿ ಮಧ್ಯಾಹ್ನ ಜರುಗಿದೆ.</p>.<p>ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಕಟಕೋಳ ಪೊಲೀಸರು ತಾಯಿ ಮತ್ತು ಒಂದು ಮಗುವಿನ ಶವಗಳನ್ನು ಹೊರತೆಗೆದಿದ್ದಾರೆ. ಬೆಳಗಾವಿಯಿಂದ ಸೋಕೊ ಟೀಮಿನ ಈಜು ತಜ್ಞರು ಇನ್ನೊಂದು ಮಗುವಿನ ಶವಕ್ಕಾಗಿ ತೀವ್ರ ಶೋಧ ನಡೆಸಿದ್ದಾರೆ.</p>.<p>ಮೃತ ಮಹಿಳೆಯನ್ನು ಗೋಕಾಕ ತಾಲ್ಲೂಕಿನ ಬೆನಚಿನಮರಡಿ ಗ್ರಾಮದ ಲಕ್ಷ್ಮೀ ಮಲ್ಲಿಕಾರ್ಜುನ ಗೌಡವ್ವಗೋಳ (24), ಹಾಲವ್ವ (3) ಮತ್ತು ಹಾಲಪ್ಪ (1) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.</p>.<p>ಗಂಡನ ಮನೆಯವರು ಮತ್ತು ತವರು ಮನೆಯವರು ಕುರಿ ಮೇಯಿಸಿಕೊಂಡು ರಾಮದುರ್ಗ ತಾಲ್ಲೂಕಿನ ಬೇರೆ ಬೇರೆ ಗ್ರಾಮಗಳಲ್ಲಿ ವಾಸಿಸುತ್ತಿದ್ದರು. ಮೈಯಲ್ಲಿ ಹುಷಾರಿಲ್ಲ ಎಂದು ಲಕ್ಷ್ಮೀ ಬೆನಚಿನಮರಡಿಗೆ ಹೋಗಿದ್ದಳು. ಸಿದ್ನಾಳಕ್ಕೆ ಆಗಮಿಸಿ ಮಂಗಳವಾರ ಮಧ್ಯಾಹ್ನ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಕಟಕೋಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಪಿಐ ವಿನಾಯಕ ಬಡಿಗೇರ, ಪಿಎಸ್ಐ ಬಸವರಾಜ ಕೊಣ್ಣೂರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>