ಮಹಾರಾಷ್ಟ್ರದ ಜತ್ತ ತಾಲ್ಲೂಕಿನ ಸಿಂದೂರ ಗ್ರಾಮದ 51 ವರ್ಷದ ಸೋಂಕಿತ ವ್ಯಕ್ತಿಯನ್ನು ಅಥಣಿಯ ಖಾಸಗಿ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ನಗರಕ್ಕೆ ಕರೆತರಲಾಗುತ್ತಿತ್ತು. ಈ ವೇಳೆ ಹುಕ್ಕೇರಿ–ಅಥಣಿ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಮೃತ ಸವಾರರನ್ನು ರಬಕವಿಯ ಸಾಗರ ಮಲ್ಲಪ್ಪ ದೊಡವಾಡ (18) ಎಂದು ಗುರುತಿಸಲಾಗಿದೆ. ಹಿಂಬದಿ ಸವಾರ ಗೋಪಾಲ ಅಣ್ಣಪ್ಪ ಮೂಲಿಮನಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.