ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಮಗಾರಿ ಚುರುಕುಗೊಳಿಸಲು ಸಂಸದೆ ಮಂಗಲಾ ಅಂಗಡಿ ಸೂಚನೆ

Last Updated 1 ಜುಲೈ 2021, 15:01 IST
ಅಕ್ಷರ ಗಾತ್ರ

ಬೆಳಗಾವಿ: ನಗರದ ರೈಲು ನಿಲ್ದಾಣದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ಚುರುಕುಗೊಳಿಸಬೇಕು ಎಂದು ಸಂಸದೆ ಮಂಗಲಾ ಸುರೇಶ ಅಂಗಡಿ ಅವರು ಅಧಿಕಾರಿಗಳಿಗೆ ಗುರುವಾರ ಸೂಚಿಸಿದರು.

ರೈಲ್ವೆ ವಿಕಾಸ ನಿಗಮ ನಿಯಮಿತ (ಆರ್‌ವಿಎನ್ಎಲ್‌) ಅಧಿಕಾರಿಗಳೊಂದಿಗೆ ತಮ್ಮ ಗೃಹ ಕಚೇರಿಯಲ್ಲಿ ಚರ್ಚಿಸಿದರು.

‘ಕೇಂದ್ರ ನಿಲ್ದಾಣದ ಸರ್ವಾಂಗೀಣ ಅಭಿವೃದ್ಧಿಗೆ ₹ 190 ಕೋಟಿ ದೊರೆತಿದೆ. ಕಾಮಗಾರಿ ಪೂರ್ಣಗೊಳಿಸಿ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಬೇಕು’ ಎಂದರು.

‘ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ದಿವಂಗತ ಸುರೇಶ ಅಂಗಡಿ ಅವರು ನಿಲ್ದಾಣವನ್ನು ಅತ್ಯಾಧುನಿಕವಾಗಿ ರೂಪಿಸುವ ಕನಸು ಕಂಡಿದ್ದರು. ಅದರಂತೆ ಉನ್ನತ್ತಿಕರಣಕ್ಕಾಗಿ ಅನುಮೋದನೆ ಪಡೆದಿದ್ದರು’ ಎಂದು ಸ್ಮರಿಸಿದರು.

ಆರ್‌ವಿಎನ್‌ಎಲ್ ಪ್ರಧಾನ ವ್ಯವಸ್ಥಾಪಕ ಅರುಣಕುಮಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT