ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏರ್‌ ಬಸ್‌ಗೆ ಪರ್ಯಾಯ ವ್ಯವಸ್ಥೆ ಕೋರಿಕೆ

Last Updated 27 ಮೇ 2019, 15:04 IST
ಅಕ್ಷರ ಗಾತ್ರ

ಬೆಳಗಾವಿ: ಜೂನ್‌ ಮೊದಲನೇ ವಾರದಲ್ಲಿ ಇಲ್ಲಿಂದ ಹುಬ್ಬಳ್ಳಿಗೆ ಸ್ಥಳಾಂತರವಾಗುತ್ತಿರುವ ಏರ್ ಇಂಡಿಯಾ ವಿಮಾನದ (ಏರ್ ಬಸ್) ಬದಲಿಗೆ, ಪ‌ರ್ಯಾಯ ವ್ಯವಸ್ಥೆಗೆ ಹಾಗೂ ಹೆಚ್ಚಿನ ವಿಮಾನಗಳು ಹಾರಾಡುವಂತೆ ಮಾಡುವ ನಿಟ್ಟಿನಲ್ಲಿ ಸಂಸದ ಸುರೇಶ ಅಂಗಡಿ ಪ್ರಯತ್ನ ಆರಂಭಿಸಿದ್ದಾರೆ.

ಏರ್‌ ಇಂಡಿಯಾ ಅಧ್ಯಕ್ಷ ಅಶ್ವಿನ್ ಲೋಹಾನಿ ಅವರನ್ನು ನವದೆಹಲಿಯಲ್ಲಿ ಸೋಮವಾರ ಭೇಟಿಯಾದ ಅವರು, ಏರ್‌ ಅಲಯನ್ಸ್‌ನ ಮತ್ತೊಂದು ವಿಮಾನದ ಕಾರ್ಯಾಚರಣೆ ಆರಂಭಿಸುವಂತೆ ಕೋರಿದ್ದಾರೆ. ‘ಮನವಿಗೆ ಅವರಿಂದ ಸಕಾರಾತ್ಮಕ ಸ್ಪಂದನೆ ಬಂದಿದೆ’ ಎಂದು ಟ್ವೀಟ್ ಮಾಡಿದ್ದಾರೆ.

ಸಂಜೆ ನಾಗರಿಕ ವಿಮಾನಯಾನ ಸಚಿವಾಲಯದ ಕಾರ್ಯದರ್ಶಿ ಪ್ರದೀಪ್ ಸಿಂಗ್ ಖರೋಲಾ ಅವರನ್ನೂ ಭೇಟಿಯಾದ ಅವರು, ‘ಸಾಂಬ್ರಾದಿಂದ ಹೆಚ್ಚಿನ ವಿಮಾನಗಳ ಕಾರ್ಯಾಚರಣೆ ನಡೆಸಬೇಕು’ ಎಂದು ಕೋರಿದ್ದಾರೆ. ‘ಸ್ಪೈಸ್‌ ಜೆಟ್ ಕಂಪನಿಯು ಜೂನ್‌ 20ರಿಂದ ಬೆಳಗಾವಿ–ಮುಂಬೈ–ಬೆಂಗಳೂರು, ಮುಂಬೈ–ಬೆಳಗಾವಿ–ಬೆಂಗಳೂರು ಮಾರ್ಗದಲ್ಲಿ ವಿಮಾನ ಸೇವೆ ಆರಂಭಿಸಲಾಗುವುದು. ಅಲ್ಲಿವರೆಗೆ ಸಹಕರಿಸುವಂತೆ ಕೋರಿದ್ದಾರೆ’ ಎಂದು ಸಂಸದರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT