ಸಂಜೆ ನಾಗರಿಕ ವಿಮಾನಯಾನ ಸಚಿವಾಲಯದ ಕಾರ್ಯದರ್ಶಿ ಪ್ರದೀಪ್ ಸಿಂಗ್ ಖರೋಲಾ ಅವರನ್ನೂ ಭೇಟಿಯಾದ ಅವರು, ‘ಸಾಂಬ್ರಾದಿಂದ ಹೆಚ್ಚಿನ ವಿಮಾನಗಳ ಕಾರ್ಯಾಚರಣೆ ನಡೆಸಬೇಕು’ ಎಂದು ಕೋರಿದ್ದಾರೆ. ‘ಸ್ಪೈಸ್ ಜೆಟ್ ಕಂಪನಿಯು ಜೂನ್ 20ರಿಂದ ಬೆಳಗಾವಿ–ಮುಂಬೈ–ಬೆಂಗಳೂರು, ಮುಂಬೈ–ಬೆಳಗಾವಿ–ಬೆಂಗಳೂರು ಮಾರ್ಗದಲ್ಲಿ ವಿಮಾನ ಸೇವೆ ಆರಂಭಿಸಲಾಗುವುದು. ಅಲ್ಲಿವರೆಗೆ ಸಹಕರಿಸುವಂತೆ ಕೋರಿದ್ದಾರೆ’ ಎಂದು ಸಂಸದರು ಮಾಹಿತಿ ನೀಡಿದ್ದಾರೆ.