<p><strong>ಹಿರೇಬಾಗೇವಾಡಿ:</strong> ‘ಜನರ ಕಷ್ಟ ಸುಖಗಳ ಬಗ್ಗೆ ಅರಿವಿರುವ ಮೃಣಾಲ್ ಹೆಬ್ಬಾಳಕರ, ಕ್ಷೇತ್ರದ ಅಭಿವೃದ್ಧಿಗೆ ತನ್ನದೇ ಆದ ಕನಸು ಕಟ್ಟಿಕೊಂಡಿದ್ದಾನೆ. ಬೆಳಗಾವಿ ಧ್ವನಿಯಾಗಿ ಸಂಸತ್ನಲ್ಲಿ ಕೆಲಸ ಮಾಡಲಿದ್ದಾನೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು.</p>.<p>ಇಲ್ಲಿಗೆ ಸಮೀಪದ ಗಜಪತಿ, ಬಡಸ್ ಕೆ.ಎಚ್., ಕುಕಡೊಳ್ಳಿ, ಬೆಂಡಿಗೇರಿ, ನಾಗೇರಹಾಳ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಪರ ಶನಿವಾರ ಮತಯಾಚಿಸಿದ ಅವರು, ‘ನೀವೆಲ್ಲ ಆಶೀರ್ವಾದ ಮಾಡಿ ಅವನನ್ನು ಸಂಸತ್ಗೆ ಕಳುಹಿಸಿಕೊಡಿ’ ಎಂದು ವಿನಂತಿಸಿಕೊಂಡರು.</p>.<p><strong>ಮನೆ</strong> <strong>ಮಗ</strong> <strong>ಬೇಕೋ, ಹೊರಗಿನವರೋ?</strong>: ಹುಬ್ಬಳ್ಳಿ–ಧಾರವಾಡ ಜನರಿಂದ ತಿರಸ್ಕಾರಕ್ಕೊಳಗಾಗಿ, ಹಾವೇರಿಯಿಂದ ಟಿಕೆಟ್ ಸಿಗದೆ ಇದೀಗ ಬೆಳಗಾವಿಗೆ ವಲಸೆ ಬಂದಿರುವ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಬೇಕೋ, ನಿಮ್ಮ ಮನೆ ಮಗ ಮೃಣಾಲ್ ಬೇಕೋ ಎಂದು ನೀವೇ ನಿರ್ಧರಿಸಿ ಎಂದು ಸಚಿವರು ಹೇಳಿದರು.</p>.<p>ಮೃಣಾಲ್ ಹೆಬ್ಬಾಳಕರ, ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೋಳಿ, ಸ್ಥಳೀಯ ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರೇಬಾಗೇವಾಡಿ:</strong> ‘ಜನರ ಕಷ್ಟ ಸುಖಗಳ ಬಗ್ಗೆ ಅರಿವಿರುವ ಮೃಣಾಲ್ ಹೆಬ್ಬಾಳಕರ, ಕ್ಷೇತ್ರದ ಅಭಿವೃದ್ಧಿಗೆ ತನ್ನದೇ ಆದ ಕನಸು ಕಟ್ಟಿಕೊಂಡಿದ್ದಾನೆ. ಬೆಳಗಾವಿ ಧ್ವನಿಯಾಗಿ ಸಂಸತ್ನಲ್ಲಿ ಕೆಲಸ ಮಾಡಲಿದ್ದಾನೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು.</p>.<p>ಇಲ್ಲಿಗೆ ಸಮೀಪದ ಗಜಪತಿ, ಬಡಸ್ ಕೆ.ಎಚ್., ಕುಕಡೊಳ್ಳಿ, ಬೆಂಡಿಗೇರಿ, ನಾಗೇರಹಾಳ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಪರ ಶನಿವಾರ ಮತಯಾಚಿಸಿದ ಅವರು, ‘ನೀವೆಲ್ಲ ಆಶೀರ್ವಾದ ಮಾಡಿ ಅವನನ್ನು ಸಂಸತ್ಗೆ ಕಳುಹಿಸಿಕೊಡಿ’ ಎಂದು ವಿನಂತಿಸಿಕೊಂಡರು.</p>.<p><strong>ಮನೆ</strong> <strong>ಮಗ</strong> <strong>ಬೇಕೋ, ಹೊರಗಿನವರೋ?</strong>: ಹುಬ್ಬಳ್ಳಿ–ಧಾರವಾಡ ಜನರಿಂದ ತಿರಸ್ಕಾರಕ್ಕೊಳಗಾಗಿ, ಹಾವೇರಿಯಿಂದ ಟಿಕೆಟ್ ಸಿಗದೆ ಇದೀಗ ಬೆಳಗಾವಿಗೆ ವಲಸೆ ಬಂದಿರುವ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಬೇಕೋ, ನಿಮ್ಮ ಮನೆ ಮಗ ಮೃಣಾಲ್ ಬೇಕೋ ಎಂದು ನೀವೇ ನಿರ್ಧರಿಸಿ ಎಂದು ಸಚಿವರು ಹೇಳಿದರು.</p>.<p>ಮೃಣಾಲ್ ಹೆಬ್ಬಾಳಕರ, ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೋಳಿ, ಸ್ಥಳೀಯ ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>