<p><strong>ಮೂಡಲಗಿ:</strong> ‘ಹವಾಮಾನ ವೈಪರೀತ್ಯದಿಂದ ಪರಿಸರ ಸಮತೋಲನ ಕಳೆದುಕೊಳ್ಳುತ್ತಿದ್ದು, ಸರಿಯಾದ ಸಮಯಕ್ಕೆ ಮಳೆ ಬಾರದೆ ಸಂಕಷ್ಟ ಅನುಭವಿಸುವಂತಾಗಿದೆ’ ಎಂದು ಮೂಡಲಗಿ ಸೆಷನ್ಸ್ ಹಾಗೂ ಜೆಎಂಎಎಫ್ ನ್ಯಾಯಾಲಯದ ನ್ಯಾಯಾಧೀಶೆ ಜ್ಯೋತಿ ಪಾಟೀಲ ಹೇಳಿದರು.</p>.<p>ಪಟ್ಟಣದ ಸೆಷನ್ಸ್ ಹಾಗೂ ಜೆಎಂಎಫ್ ನ್ಯಾಯಾಲಯದ ಆವರಣದಲ್ಲಿ ಪ್ರಾದೇಶಿಕ ಅರಣ್ಯ ವಲಯದ ಆಶ್ರಯದಲ್ಲಿ ಸಸಿ ನೆಟ್ಟು, ನೀರುಣಿಸಿ ಮಾತನಾಡಿದರು.</p>.<p>ಉಪ ವಯಲದ ಅರಣ್ಯಾಧಿಕಾರಿ ಅಶೋಕ ಮಾಧುರಿ ಮಾತನಾಡಿ, ‘ಪರಿಸರದ ಬಗ್ಗೆ ಜನರಿಗೆ ಜಾಗೃತಿ ಮೂಡಿಸಲು ಇಲಾಖೆಯಿಂದ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಪರಿಸರ ದಿನಾಚರಣೆ ಅಂಗವಾಗಿ ಸುಮಾರು 500 ಸಸಿಗಳನ್ನು ನೆಟ್ಟು ಆರೈಕ ಮಾಡಲಾಗುವುದು’ ಎಂದರು.</p>.<p>ಇಲಾಖೆಯ ಗಸ್ತು ಅಧಿಕಾರಿಗಳಾದ ಮಹಾಂತೇಶ ಹಿಪ್ಪರಗಿ, ಕವನ್ ನಂದಿ, ವಕೀಲರ ಸಂಘದ ಅಧ್ಯಕ್ಷ ಆರ್.ಆರ್. ಭಾಗೋಜಿ, ಸಹ ಕಾರ್ಯದರ್ಶಿ ಎಸ್.ವೈ. ಸಣ್ಣಕ್ಕಿ, ಖಂಜಾಚಿ ಆರ್.ಎಸ್. ತೋಳಮರಡಿ, ನ್ಯಾಯಾಲಯದ ಸಿಬ್ಬಂದಿಗಳು, ಪೊಲೀಸ್ ಇಲಾಖೆಯ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡಲಗಿ:</strong> ‘ಹವಾಮಾನ ವೈಪರೀತ್ಯದಿಂದ ಪರಿಸರ ಸಮತೋಲನ ಕಳೆದುಕೊಳ್ಳುತ್ತಿದ್ದು, ಸರಿಯಾದ ಸಮಯಕ್ಕೆ ಮಳೆ ಬಾರದೆ ಸಂಕಷ್ಟ ಅನುಭವಿಸುವಂತಾಗಿದೆ’ ಎಂದು ಮೂಡಲಗಿ ಸೆಷನ್ಸ್ ಹಾಗೂ ಜೆಎಂಎಎಫ್ ನ್ಯಾಯಾಲಯದ ನ್ಯಾಯಾಧೀಶೆ ಜ್ಯೋತಿ ಪಾಟೀಲ ಹೇಳಿದರು.</p>.<p>ಪಟ್ಟಣದ ಸೆಷನ್ಸ್ ಹಾಗೂ ಜೆಎಂಎಫ್ ನ್ಯಾಯಾಲಯದ ಆವರಣದಲ್ಲಿ ಪ್ರಾದೇಶಿಕ ಅರಣ್ಯ ವಲಯದ ಆಶ್ರಯದಲ್ಲಿ ಸಸಿ ನೆಟ್ಟು, ನೀರುಣಿಸಿ ಮಾತನಾಡಿದರು.</p>.<p>ಉಪ ವಯಲದ ಅರಣ್ಯಾಧಿಕಾರಿ ಅಶೋಕ ಮಾಧುರಿ ಮಾತನಾಡಿ, ‘ಪರಿಸರದ ಬಗ್ಗೆ ಜನರಿಗೆ ಜಾಗೃತಿ ಮೂಡಿಸಲು ಇಲಾಖೆಯಿಂದ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಪರಿಸರ ದಿನಾಚರಣೆ ಅಂಗವಾಗಿ ಸುಮಾರು 500 ಸಸಿಗಳನ್ನು ನೆಟ್ಟು ಆರೈಕ ಮಾಡಲಾಗುವುದು’ ಎಂದರು.</p>.<p>ಇಲಾಖೆಯ ಗಸ್ತು ಅಧಿಕಾರಿಗಳಾದ ಮಹಾಂತೇಶ ಹಿಪ್ಪರಗಿ, ಕವನ್ ನಂದಿ, ವಕೀಲರ ಸಂಘದ ಅಧ್ಯಕ್ಷ ಆರ್.ಆರ್. ಭಾಗೋಜಿ, ಸಹ ಕಾರ್ಯದರ್ಶಿ ಎಸ್.ವೈ. ಸಣ್ಣಕ್ಕಿ, ಖಂಜಾಚಿ ಆರ್.ಎಸ್. ತೋಳಮರಡಿ, ನ್ಯಾಯಾಲಯದ ಸಿಬ್ಬಂದಿಗಳು, ಪೊಲೀಸ್ ಇಲಾಖೆಯ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>