<p><strong>ಮೂಡಲಗಿ (ಬೆಳಗಾವಿ ಜಿಲ್ಲೆ):</strong> ತಾಲ್ಲೂಕಿನ ಶಿವಾಪುರ (ಹ) ಗ್ರಾಮದ ಅಡವಿಸಿದ್ಧೇಶ್ವರ ಶಾಖಾ ಮಠದಿಂದ ಅಡವಿಸಿದ್ದರಾಮ ಸ್ವಾಮೀಜಿ ಅವರನ್ನು ಬಹಿಷ್ಕಾರ ಹಾಕಿದ್ದನ್ನು ಗ್ರಾಮದ ಬಹುತೇಕ ಜನರು ಖಂಡಿಸಿದರು.</p><p>‘ಮಠದಲ್ಲಿ ಮಹಿಳೆಯೊಬ್ಬರನ್ನು ಉಳಿಸಿಕೊಂಡಿದ್ದಾರೆ’ ಎಂದು ಆರೋಪಿಸಿ ಗ್ರಾಮದ ಕೆಲವರು ಭಾನುವಾರ ಸ್ವಾಮೀಜಿಯವರನ್ನು ಮಠದಿಂದ ಹೊರಹಾಕಿದ್ದರು.</p><p>ಗೋಕಾಕದ ಶೂನ್ಯ ಸಂಪಾದನಾ ಮಠದಲ್ಲಿ ಆಶ್ರಯ ಪಡೆದಿರುವ ಸ್ವಾಮೀಜಿಯವರನ್ನು ಸೋಮವಾರ ಭೇಟಿಯಾದ ಗ್ರಾಮಸ್ಥರು, ‘ಷಡ್ಯಂತ್ರ ನಡೆದಿದೆ. ನಾವು ನಿಮ್ಮೊಂದಿಗೆ ಇದ್ದೇವೆ. ನೀವು ಮಠಕ್ಕೆ ಬರಬೇಕು’ ಎಂದು ಕೋರಿದರು.</p><p>‘ಶ್ರೀಗಳ ಮೇಲೆ ಸುಳ್ಳು ಆಪಾದನೆ ಮಾಡಿ, ಮಠದಿಂದ ಹೊರ ಹಾಕುವ ಕುತಂತ್ರ ನಡೆದಿದೆ. ಇದರ ಸತ್ಯಾಸತ್ಯತೆ ಹೊರಬರಬೇಕು. ಈ ಕೃತ್ಯದ ಹಿಂದೆ ಯಾರ ಕೈವಾಡ ಇದೆ ಎಂಬುದು ಗೊತ್ತಾಗಬೇಕು. ಮಠದ ಮೇಲೆ ದಾಳಿ ಮಾಡಿದ ಆರೋಪಿಗಳಿಗೆ ಶಿಕ್ಷೆಯಾಗಬೇಕು’ ಎಂದು ಮಹಿಳೆಯರು ಒತ್ತಾಯಿಸಿದರು.</p><p>‘ಶನಿವಾರ ಮಹಿಳೆ ಮತ್ತು ಅವರ 15 ವರ್ಷದ ಪುತ್ರಿ ಮಠಕ್ಕೆ ಬಂದಿದ್ದರು. ರಾತ್ರಿಯಾದ ಕಾರಣ ದೂರದ ಊರಿನ ಪ್ರಯಾಣ ಕಷ್ಟವೆಂದು ಭಾವಿಸಿ, ಮಠದಲ್ಲಿ ಅವರಿಗೆ ಆಶ್ರಯ ಕೊಟ್ಟಿದ್ದೆ. ನಾನು ಏನೂ ತಪ್ಪು ಮಾಡಿಲ್ಲ’ ಎಂದು ಸ್ವಾಮೀಜಿ ಹೇಳಿದರು.</p><p>ಈ ವಿಷಯವನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸಮ್ಮುಖದಲ್ಲಿಯೇ ಬಗೆಹರಿಸಬೇಕು ಎಂದು ನಿರ್ಧರಿಸಿದ ಗ್ರಾಮದ ಜನ, ಗೋಕಾಕದ ಎನ್ಎಸ್ಎಫ್ ಸಂಸ್ಥೆಯ ಆವರಣದಲ್ಲಿ ಬೀಡು ಬಿಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡಲಗಿ (ಬೆಳಗಾವಿ ಜಿಲ್ಲೆ):</strong> ತಾಲ್ಲೂಕಿನ ಶಿವಾಪುರ (ಹ) ಗ್ರಾಮದ ಅಡವಿಸಿದ್ಧೇಶ್ವರ ಶಾಖಾ ಮಠದಿಂದ ಅಡವಿಸಿದ್ದರಾಮ ಸ್ವಾಮೀಜಿ ಅವರನ್ನು ಬಹಿಷ್ಕಾರ ಹಾಕಿದ್ದನ್ನು ಗ್ರಾಮದ ಬಹುತೇಕ ಜನರು ಖಂಡಿಸಿದರು.</p><p>‘ಮಠದಲ್ಲಿ ಮಹಿಳೆಯೊಬ್ಬರನ್ನು ಉಳಿಸಿಕೊಂಡಿದ್ದಾರೆ’ ಎಂದು ಆರೋಪಿಸಿ ಗ್ರಾಮದ ಕೆಲವರು ಭಾನುವಾರ ಸ್ವಾಮೀಜಿಯವರನ್ನು ಮಠದಿಂದ ಹೊರಹಾಕಿದ್ದರು.</p><p>ಗೋಕಾಕದ ಶೂನ್ಯ ಸಂಪಾದನಾ ಮಠದಲ್ಲಿ ಆಶ್ರಯ ಪಡೆದಿರುವ ಸ್ವಾಮೀಜಿಯವರನ್ನು ಸೋಮವಾರ ಭೇಟಿಯಾದ ಗ್ರಾಮಸ್ಥರು, ‘ಷಡ್ಯಂತ್ರ ನಡೆದಿದೆ. ನಾವು ನಿಮ್ಮೊಂದಿಗೆ ಇದ್ದೇವೆ. ನೀವು ಮಠಕ್ಕೆ ಬರಬೇಕು’ ಎಂದು ಕೋರಿದರು.</p><p>‘ಶ್ರೀಗಳ ಮೇಲೆ ಸುಳ್ಳು ಆಪಾದನೆ ಮಾಡಿ, ಮಠದಿಂದ ಹೊರ ಹಾಕುವ ಕುತಂತ್ರ ನಡೆದಿದೆ. ಇದರ ಸತ್ಯಾಸತ್ಯತೆ ಹೊರಬರಬೇಕು. ಈ ಕೃತ್ಯದ ಹಿಂದೆ ಯಾರ ಕೈವಾಡ ಇದೆ ಎಂಬುದು ಗೊತ್ತಾಗಬೇಕು. ಮಠದ ಮೇಲೆ ದಾಳಿ ಮಾಡಿದ ಆರೋಪಿಗಳಿಗೆ ಶಿಕ್ಷೆಯಾಗಬೇಕು’ ಎಂದು ಮಹಿಳೆಯರು ಒತ್ತಾಯಿಸಿದರು.</p><p>‘ಶನಿವಾರ ಮಹಿಳೆ ಮತ್ತು ಅವರ 15 ವರ್ಷದ ಪುತ್ರಿ ಮಠಕ್ಕೆ ಬಂದಿದ್ದರು. ರಾತ್ರಿಯಾದ ಕಾರಣ ದೂರದ ಊರಿನ ಪ್ರಯಾಣ ಕಷ್ಟವೆಂದು ಭಾವಿಸಿ, ಮಠದಲ್ಲಿ ಅವರಿಗೆ ಆಶ್ರಯ ಕೊಟ್ಟಿದ್ದೆ. ನಾನು ಏನೂ ತಪ್ಪು ಮಾಡಿಲ್ಲ’ ಎಂದು ಸ್ವಾಮೀಜಿ ಹೇಳಿದರು.</p><p>ಈ ವಿಷಯವನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸಮ್ಮುಖದಲ್ಲಿಯೇ ಬಗೆಹರಿಸಬೇಕು ಎಂದು ನಿರ್ಧರಿಸಿದ ಗ್ರಾಮದ ಜನ, ಗೋಕಾಕದ ಎನ್ಎಸ್ಎಫ್ ಸಂಸ್ಥೆಯ ಆವರಣದಲ್ಲಿ ಬೀಡು ಬಿಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>