ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಧೋಳ ನಗರಸಭೆ ಅಧ್ಯಕ್ಷ ಸಿದ್ಧನಾಥ ಮಾನೆ ಕೋವಿಡ್‌ನಿಂದ ಸಾವು

Last Updated 23 ಮೇ 2021, 13:52 IST
ಅಕ್ಷರ ಗಾತ್ರ

ಬಾಗಲಕೋಟೆ: ಇಲ್ಲಿನ ಮುಧೋಳದ ನಗರಸಭೆ ಅಧ್ಯಕ್ಷ ಸಿದ್ಧನಾಥ (ಸಂಜು) ದಾದಾಸಾಹೇಬ್ ಮಾನೆ (32) ಕೋವಿಡ್ ಸೋಂಕಿನಿಂದ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನ ಹೊಂದಿದರು.

ಮುಧೋಳದ ವಾರ್ಡ್ ನಂ. 18 ರಿಂದ ಮೊದಲ ಬಾರಿಗೆ ಬಿಜೆಪಿಯಿಂದ ಆಯ್ಕೆಯಾಗಿದ್ದ ಅವರಿಗೆ ಕಿರಿಯ ವಯಸ್ಸಿನಲ್ಲಿಯೇ ನಗರಸಭೆ ಅಧ್ಯಕ್ಷರಾಗುವ ಅವಕಾಶ ಒಲಿದು ಬಂದಿತ್ತು.

ರಾಷ್ಟ್ರಮಟ್ಟದ ಕುಸ್ತಿಪಟು ಆಗಿದ್ದ ಅವರು ಎರಡು ಬಾರಿ ಕರ್ನಾಟಕ ಕೇಸರಿ ಹಾಗೂ ಒಂದು ಬಾರಿ ಕರ್ನಾಟಕ ಕಂಠೀರವ ಪ್ರಶಸ್ತಿಗೆ ಭಾಜನರಾಗಿದ್ದರು.

ಸಿದ್ಧನಾಥ ಮಾನೆ ಅವರ ತಾಯಿ ರಾಧಾಬಾಯಿ ಮಾನೆ ಕೂಡಾ ಕೋವಿಡ್ ಸೋಂಕಿನಿಂದ ಮೇ 20ರಂದು ನಿಧನರಾಗಿದ್ದರು. ಮೂರು ದಿನಗಳಲ್ಲಿಯೇ ಪುತ್ರನೂ ಸಾವನ್ನಪ್ಪಿದ್ದಾರೆ.

ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಸಿದ್ದನಾಥ ಮಾನೆ ಅವರಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT