<p><strong>ಮೂಡಲಗಿ</strong>: ‘ಕಾರ್ಮಿಕರು ಕಡ್ಡಾಯವಾಗಿ ಕಾರ್ಮಿಕ ಗುರುತಿನ ಪತ್ರವನ್ನು ಮಾಡಿಕೊಂಡು ಅದರ ಮೂಲಕ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು’ ಎಂದು ಮೂಡಲಗಿಯ ಜೆಎಂಎಫ್ಸಿ ನ್ಯಾಯಾಲಯದ ಹಿರಿಯ ಸಿವಿಲ ನ್ಯಾಯಾಧೀಶೆ ಶಾಂತಮ್ಮ ಮಲ್ಲಿಕಾರ್ಜುನ ಗೌಡ ಪಿ. ಹೇಳಿದರು.</p>.<p>ಮೂಡಲಗಿ ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ತಾಲ್ಲೂಕು ಕಾರ್ಮಿಕ ಇಲಾಖೆ ಸಹಯೋಗದಲ್ಲಿ ಆಚರಿಸಿದ ಅಂತರ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಕಾರ್ಮಿಕರು ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು ಮತ್ತು ಬಾಲ್ಯ ವಿವಾಹ ಮಾಡಬಾರದು. ಮಾಡಿದರೆ ಕಠಿಣ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂದು ಹೇಳಿದರು.</p>.<p>ತಾಲ್ಲೂಕು ಕಾರ್ಮಿಕ ಇಲಾಖೆ ನಿರೀಕ್ಷಕ ಪಾಂಡುರಂಗ ಮಾವರಕರ ಮಾತನಾಡಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರಿಗೆ ಸರ್ಕಾರದ ಪ್ರತ್ಯೇಕ ಸೌಲಭ್ಯಗಳಿವೆ. ಅಸಂಘಟಿತರಿಗೆ ಮದುವೆಗೆ ಧನ ಸಹಾಯ, ಅಪಘಾತ ಪರಿಹಾರದಂತ ಹಲವಾರ ಸೌಲಭ್ಯಗಳಿದ್ದು, ಕಾರ್ಮಿಕರು ಕಡ್ಡಾಯವಾಗಿ ನೋಂದಣಿ ಮಾಡಿಸಿ ಕಾರ್ಮಿಕ ಕಾರ್ಡ್ ಮಾಡಿಸಬೇಕು ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಆರ್.ಆರ್. ಭಾಗೋಜಿ ಮಾತನಾಡಿದರು.</p>.<p>ನ್ಯಾಯವಾದಿಗಳ ಸಂಘದ ಪದಾಧಿಕಾರಿಗಳಾದ ಎಲ್.ಬಿ.ವಡೇರ, ಅನಿಲ ಕೌಜಲಗಿ, ಎಲ್.ಎಸ್. ಯಡ್ರಾಂವಿ, ಎಸ್.ವೈ.ಸಣ್ಣಕ್ಕಿ, ಆರ್.ಎಸ್. ತೋಳಮರ್ಡಿ, ಜ್ಯೋತಿ ಕುಡತೆ, ರವಿ ಸಿಮೆಂಟ್ ಪ್ರೋಡಕ್ಟ್ಸ್ ಇಂಡಸ್ಟ್ರೀಸ್ನ ಮಾಲಿಕರಾದ ಬಸವರಾಜ ಢವಳೇಶ್ವರ, ಕಾರ್ಮಿಕರ ಸಂಘದ ಅಧ್ಯಕ್ಷ ಬಸವರಾಜ ಪೋಳ, ಕಾರ್ಯದರ್ಶಿ ಸುಭಾಷ ಗೊಡ್ಯಾಗೋಳ ಅತಿಥಿಗಳಾಗಿ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-21-1393780937</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡಲಗಿ</strong>: ‘ಕಾರ್ಮಿಕರು ಕಡ್ಡಾಯವಾಗಿ ಕಾರ್ಮಿಕ ಗುರುತಿನ ಪತ್ರವನ್ನು ಮಾಡಿಕೊಂಡು ಅದರ ಮೂಲಕ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು’ ಎಂದು ಮೂಡಲಗಿಯ ಜೆಎಂಎಫ್ಸಿ ನ್ಯಾಯಾಲಯದ ಹಿರಿಯ ಸಿವಿಲ ನ್ಯಾಯಾಧೀಶೆ ಶಾಂತಮ್ಮ ಮಲ್ಲಿಕಾರ್ಜುನ ಗೌಡ ಪಿ. ಹೇಳಿದರು.</p>.<p>ಮೂಡಲಗಿ ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ತಾಲ್ಲೂಕು ಕಾರ್ಮಿಕ ಇಲಾಖೆ ಸಹಯೋಗದಲ್ಲಿ ಆಚರಿಸಿದ ಅಂತರ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಕಾರ್ಮಿಕರು ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು ಮತ್ತು ಬಾಲ್ಯ ವಿವಾಹ ಮಾಡಬಾರದು. ಮಾಡಿದರೆ ಕಠಿಣ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂದು ಹೇಳಿದರು.</p>.<p>ತಾಲ್ಲೂಕು ಕಾರ್ಮಿಕ ಇಲಾಖೆ ನಿರೀಕ್ಷಕ ಪಾಂಡುರಂಗ ಮಾವರಕರ ಮಾತನಾಡಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರಿಗೆ ಸರ್ಕಾರದ ಪ್ರತ್ಯೇಕ ಸೌಲಭ್ಯಗಳಿವೆ. ಅಸಂಘಟಿತರಿಗೆ ಮದುವೆಗೆ ಧನ ಸಹಾಯ, ಅಪಘಾತ ಪರಿಹಾರದಂತ ಹಲವಾರ ಸೌಲಭ್ಯಗಳಿದ್ದು, ಕಾರ್ಮಿಕರು ಕಡ್ಡಾಯವಾಗಿ ನೋಂದಣಿ ಮಾಡಿಸಿ ಕಾರ್ಮಿಕ ಕಾರ್ಡ್ ಮಾಡಿಸಬೇಕು ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಆರ್.ಆರ್. ಭಾಗೋಜಿ ಮಾತನಾಡಿದರು.</p>.<p>ನ್ಯಾಯವಾದಿಗಳ ಸಂಘದ ಪದಾಧಿಕಾರಿಗಳಾದ ಎಲ್.ಬಿ.ವಡೇರ, ಅನಿಲ ಕೌಜಲಗಿ, ಎಲ್.ಎಸ್. ಯಡ್ರಾಂವಿ, ಎಸ್.ವೈ.ಸಣ್ಣಕ್ಕಿ, ಆರ್.ಎಸ್. ತೋಳಮರ್ಡಿ, ಜ್ಯೋತಿ ಕುಡತೆ, ರವಿ ಸಿಮೆಂಟ್ ಪ್ರೋಡಕ್ಟ್ಸ್ ಇಂಡಸ್ಟ್ರೀಸ್ನ ಮಾಲಿಕರಾದ ಬಸವರಾಜ ಢವಳೇಶ್ವರ, ಕಾರ್ಮಿಕರ ಸಂಘದ ಅಧ್ಯಕ್ಷ ಬಸವರಾಜ ಪೋಳ, ಕಾರ್ಯದರ್ಶಿ ಸುಭಾಷ ಗೊಡ್ಯಾಗೋಳ ಅತಿಥಿಗಳಾಗಿ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-21-1393780937</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>