<p><strong>ಮೂಡಲಗಿ</strong>: ‘ಧರ್ಮದ ಜಾಗೃತಿ ಇದ್ದರೆ ಸಮಾಜದಲ್ಲಿ ಶಾಂತಿ, ನೆಮ್ಮದಿ ನೆಲಸಲು ಸಾಧ್ಯವಿದೆ’ ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ ಹೇಳಿದರು.</p>.<p>ತಾಲ್ಲೂಕಿನ ಯಾದವಾಡದ ಬಸವೇಶ್ವರ ವೃತ್ತದಲ್ಲಿ ನೂತನವಾಗಿ ನಿರ್ಮಿಸಿರುವ ಗಜಾನನ ಮಂದಿರದ ಉದ್ಘಾಟನೆ, ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಾಗೂ ನವಗ್ರಹ ಮೂರ್ತಿಗಳ ಪ್ರತಿಷ್ಠಾಪನೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಬೆಳಗಾವಿ ಜಿಲ್ಲೆಯನ್ನು ಮಾದರಿಯಾಗಿಸುವ ನಿಟ್ಟಿನಲ್ಲಿ ಅಭಿವೃದ್ಧಿಯ ಬಗ್ಗೆ ಅಧಿವೇಶದನದಲ್ಲಿ ಪ್ರಸ್ತಾಪಿಸಿರುವೆ. ಸಂಸದರ ಅಭಿವೃದ್ಧಿ ನಿಧಿಯಿಂದ ಯಾದವಾಡಕ್ಕೆ ಸಮುದಾಯ ಭವನ ಇಲ್ಲವೆ ಗ್ರಾಮಸ್ಥರು ತಿಳಿಸುವ ಕೆಲಸವನ್ನು ಮಾಡಿಕೊಡುತ್ತೇನೆ ಎಂದರು.</p>.<p>ಮಾಜಿ ಶಾಸಕ ಜಗದೀಶ ಮೆಟಗುಡ್ಡ ಮಾತನಾಡಿದರು.</p>.<p>ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ, ಚೌಕಿ ಮಠದ ಶಿವಯೋಗಿ ದೇವರು, ತೊಂಡಿಕಟ್ಟಿ ವೆಂಕಟೇಶ ಮಹಾರಾಜರು, ಸಿದ್ದಪ್ರಭಾ ಸ್ವಾಮೀಜಿ, ಚನ್ನಬಸಪ್ಪ ಮುತ್ಯಾ ಹುಬ್ಬಳ್ಳಿ ಸಾನ್ನಿಧ್ಯ ವಹಿಸಿದ್ದರು.</p>.<p>ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಗೋವಿಂದ ಕೊಪ್ಪದ, ರಮೇಶ ಉಟಗಿ, ತಾಲ್ಲೂಕಾ ಪಂಚಾಯ್ತಿ ಮಾಜಿ ಸದಸ್ಯ ಶಂಕರ ಬೆಳಗಲಿ, ಯಾದವಾಡ ಗ್ರಾಮ ಪಂಚಾಯ್ತಿ ಅಧ್ಯಕ್ಷ ಬಸವರಾಜ ಬೂತಾಳಿ, ಉಪಾಧ್ಯಕ್ಷ ಕಲ್ಮೇಶ ಗಾಣಗಿ, ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡಲಗಿ</strong>: ‘ಧರ್ಮದ ಜಾಗೃತಿ ಇದ್ದರೆ ಸಮಾಜದಲ್ಲಿ ಶಾಂತಿ, ನೆಮ್ಮದಿ ನೆಲಸಲು ಸಾಧ್ಯವಿದೆ’ ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ ಹೇಳಿದರು.</p>.<p>ತಾಲ್ಲೂಕಿನ ಯಾದವಾಡದ ಬಸವೇಶ್ವರ ವೃತ್ತದಲ್ಲಿ ನೂತನವಾಗಿ ನಿರ್ಮಿಸಿರುವ ಗಜಾನನ ಮಂದಿರದ ಉದ್ಘಾಟನೆ, ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಾಗೂ ನವಗ್ರಹ ಮೂರ್ತಿಗಳ ಪ್ರತಿಷ್ಠಾಪನೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಬೆಳಗಾವಿ ಜಿಲ್ಲೆಯನ್ನು ಮಾದರಿಯಾಗಿಸುವ ನಿಟ್ಟಿನಲ್ಲಿ ಅಭಿವೃದ್ಧಿಯ ಬಗ್ಗೆ ಅಧಿವೇಶದನದಲ್ಲಿ ಪ್ರಸ್ತಾಪಿಸಿರುವೆ. ಸಂಸದರ ಅಭಿವೃದ್ಧಿ ನಿಧಿಯಿಂದ ಯಾದವಾಡಕ್ಕೆ ಸಮುದಾಯ ಭವನ ಇಲ್ಲವೆ ಗ್ರಾಮಸ್ಥರು ತಿಳಿಸುವ ಕೆಲಸವನ್ನು ಮಾಡಿಕೊಡುತ್ತೇನೆ ಎಂದರು.</p>.<p>ಮಾಜಿ ಶಾಸಕ ಜಗದೀಶ ಮೆಟಗುಡ್ಡ ಮಾತನಾಡಿದರು.</p>.<p>ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ, ಚೌಕಿ ಮಠದ ಶಿವಯೋಗಿ ದೇವರು, ತೊಂಡಿಕಟ್ಟಿ ವೆಂಕಟೇಶ ಮಹಾರಾಜರು, ಸಿದ್ದಪ್ರಭಾ ಸ್ವಾಮೀಜಿ, ಚನ್ನಬಸಪ್ಪ ಮುತ್ಯಾ ಹುಬ್ಬಳ್ಳಿ ಸಾನ್ನಿಧ್ಯ ವಹಿಸಿದ್ದರು.</p>.<p>ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಗೋವಿಂದ ಕೊಪ್ಪದ, ರಮೇಶ ಉಟಗಿ, ತಾಲ್ಲೂಕಾ ಪಂಚಾಯ್ತಿ ಮಾಜಿ ಸದಸ್ಯ ಶಂಕರ ಬೆಳಗಲಿ, ಯಾದವಾಡ ಗ್ರಾಮ ಪಂಚಾಯ್ತಿ ಅಧ್ಯಕ್ಷ ಬಸವರಾಜ ಬೂತಾಳಿ, ಉಪಾಧ್ಯಕ್ಷ ಕಲ್ಮೇಶ ಗಾಣಗಿ, ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>