ಸಂಜೆ 6 ಗಂಟೆಗೆ ಸಿದ್ಧಲಿಂಗೇಶ್ವರ ಪಲ್ಲಕ್ಕಿ ಉತ್ಸವದೊಂದಿಗೆ ಹೂವುಗಳಿಂದ ಅಲಂಕರಿಸಿದ ಮಹಾರಥವನ್ನು ಎಳೆಯಲಾಯಿತು. ಕಾರ್ಯಕ್ರಮದಲ್ಲಿ ಭಾಗಿಯಾದ ಭಕ್ತ ಸಮೂಹ ರಥೋತ್ಸವಕ್ಕೆ ಉತ್ತತ್ತಿ, ಬಿಸ್ಕತ್, ಬೆಂಡು– ಬತ್ತಾಸ, ಬಾಳೆಹಣ್ಣು ಎಸೆದು ಜೈಕಾರ ಹಾಕಿದರು. ರಾಜ್ಯ ಹಾಗೂ ಹೊರರಾಜ್ಯಗಳಿಂದ ಅಪಾರ ಸಂಖ್ಯೆಯ ಭಕ್ತರು ಸೇರಿದ್ದರು.