<p>ಮುಗಳಖೋಡ: ‘ಶಿಕ್ಷಣವು ಸಮಾಜದ ಪ್ರತಿಯೊಬ್ಬರಿಗೂ ಅವಶ್ಯ. ಶಿಕ್ಷಣವನ್ನು ಪಡೆದ ಪ್ರತಿ ವ್ಯಕ್ತಿ ಸಮಾಜಕ್ಕೆ ತನ್ನದೇ ಆದ ವಿಶೇಷ ಕೊಡುಗೆ ನೀಡುವುದರ ಮೂಲಕ ಸುಸಂಸ್ಕೃತ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ’ ಎಂದು ರವಿ ಇಚಲಕರಂಜಿ ಹೇಳಿದರು.</p>.<p>ಸಮೀಪದ ಯಲ್ಪಾರಟ್ಟಿಯ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಹಾಗೂ ಉನ್ನತೀಕರಿಸಿದ ಪ್ರೌಢಶಾಲೆಯಲ್ಲಿ ಸೋಮವಾರ ನಡೆದ ಶಾಲಾ ಪ್ರಾರಂಭೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.</p>.<p>ರಾಯಬಾಗದ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಬಸವರಾಜಪ್ಪ ಮಾತನಾಡಿ, ‘ಸರ್ಕಾರಿ ಶಾಲೆಗಳಲ್ಲಿ ಪರಿಣತ ಶಿಕ್ಷಕರು ಇದ್ದಾರೆ. ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವುದು ಜಾಣತನ’ ಎಂದರು.</p>.<p>ಪಿಎಸ್ಐ ದೀಪಾಲಿ ಗುಡೋಡಗಿ ಮಾತನಾಡಿದರು. ಪ್ರೌಢಶಾಲೆಗೆ ₹3 ಲಕ್ಷ ದೇಣಿಗೆಯು ಸಂಗ್ರಹವಾಗಿದ್ದು, ದಾನಿಗಳಿಗೆ ಸತ್ಕರಿಸಲಾಯಿತು.</p>.<p>ಆನಂದ ಪಟಾಯತ್, ಮಲಕಾರಿ ದಳವಾಯಿ, ಲಕ್ಕಪ್ಪ ಬಿದರಿ, ವಿಠ್ಠಲ್ ತೆರದಾಳೆ, ಲಕ್ಷ್ಮಿಕಾಂತ್ ಬಿಸ್ವೇಗಾರ, ಅಶೋಕ್ ಗುಡೋಡಗಿ, ಅನಿಲ್ ಒಡೆಯರ್ ಹಾಗೂ ಗ್ರಾಮಸ್ಥರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-21-1653152613</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಗಳಖೋಡ: ‘ಶಿಕ್ಷಣವು ಸಮಾಜದ ಪ್ರತಿಯೊಬ್ಬರಿಗೂ ಅವಶ್ಯ. ಶಿಕ್ಷಣವನ್ನು ಪಡೆದ ಪ್ರತಿ ವ್ಯಕ್ತಿ ಸಮಾಜಕ್ಕೆ ತನ್ನದೇ ಆದ ವಿಶೇಷ ಕೊಡುಗೆ ನೀಡುವುದರ ಮೂಲಕ ಸುಸಂಸ್ಕೃತ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ’ ಎಂದು ರವಿ ಇಚಲಕರಂಜಿ ಹೇಳಿದರು.</p>.<p>ಸಮೀಪದ ಯಲ್ಪಾರಟ್ಟಿಯ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಹಾಗೂ ಉನ್ನತೀಕರಿಸಿದ ಪ್ರೌಢಶಾಲೆಯಲ್ಲಿ ಸೋಮವಾರ ನಡೆದ ಶಾಲಾ ಪ್ರಾರಂಭೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.</p>.<p>ರಾಯಬಾಗದ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಬಸವರಾಜಪ್ಪ ಮಾತನಾಡಿ, ‘ಸರ್ಕಾರಿ ಶಾಲೆಗಳಲ್ಲಿ ಪರಿಣತ ಶಿಕ್ಷಕರು ಇದ್ದಾರೆ. ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವುದು ಜಾಣತನ’ ಎಂದರು.</p>.<p>ಪಿಎಸ್ಐ ದೀಪಾಲಿ ಗುಡೋಡಗಿ ಮಾತನಾಡಿದರು. ಪ್ರೌಢಶಾಲೆಗೆ ₹3 ಲಕ್ಷ ದೇಣಿಗೆಯು ಸಂಗ್ರಹವಾಗಿದ್ದು, ದಾನಿಗಳಿಗೆ ಸತ್ಕರಿಸಲಾಯಿತು.</p>.<p>ಆನಂದ ಪಟಾಯತ್, ಮಲಕಾರಿ ದಳವಾಯಿ, ಲಕ್ಕಪ್ಪ ಬಿದರಿ, ವಿಠ್ಠಲ್ ತೆರದಾಳೆ, ಲಕ್ಷ್ಮಿಕಾಂತ್ ಬಿಸ್ವೇಗಾರ, ಅಶೋಕ್ ಗುಡೋಡಗಿ, ಅನಿಲ್ ಒಡೆಯರ್ ಹಾಗೂ ಗ್ರಾಮಸ್ಥರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-21-1653152613</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>