<p><strong>ಮುಗಳಖೋಡ (ಬೆಳಗಾವಿ ಜಿಲ್ಲೆ):</strong> ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಲಸಿಕೆ ಪಡೆಯಲು ಜನರು ಅಂತರವನ್ನೂ ಮರೆತು ಶುಕ್ರವಾರ ಮುಗಿಬಿದ್ದರು.</p>.<p>‘ಕೋವಿಡ್ ನಿಯಮ ಉಲ್ಲಂಘನೆ ಆಗದಂತೆ ಸರದಿ ಸಾಲಿನಲ್ಲಿ ಬನ್ನಿರಿ’ ಎಂದು ಮನವಿ ಮಾಡಿದ ಆಸ್ಪತ್ರೆಯ ಸಿಬ್ಬಂದಿ ಜೊತೆ ಕೆಲವರು ವಾಗ್ವಾದ ನಡೆಸಿದರು.</p>.<p>ಲಸಿಕೆಗಾಗಿ ಬಹಳಷ್ಟು ಮಂದಿ ಬರುತ್ತಿದ್ದಾರೆ. ಆದರೆ, ಅವರೆಲ್ಲರಿಗೂ ಲಸಿಕೆ ಸಿಗುತ್ತಿಲ್ಲ.</p>.<p>‘ನಿತ್ಯ 100 ಮಂದಿಗೆ ಟೋಕನ್ ಕೊಟ್ಟು ಲಸಿಕೆ ನೀಡಲಾಗುತ್ತಿದೆ. ಆದರೂ ಸಾರ್ವಜನಿಕರ ನಿಯಂತ್ರಣ ಸಾಧ್ಯವಾಗುತ್ತಿಲ್ಲ. ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಜುಲೈ 17ರಿಂದ ವ್ಯವಸ್ಥೆ ಮಾಡಲಾಗುವುದು’ ಎಂದು ವೈದ್ಯಾಧಿಕಾರಿ ಎಸ್.ಎಂ. ಪಾಟೀಲ ಹೇಳಿದರು.</p>.<p>ಜನರನ್ನು ನಿಯಂತ್ರಿಸಲು ಸಾಧ್ಯವಾಗದಿದ್ದಾಗ ಸಿಬ್ಬಂದಿಯು ಹಾರೂಗೇರಿ ಪೋಲಿಸ್ ಠಾಣೆಗೆ ವಿಷಯ ತಿಳಿಸಿದರು.</p>.<p>ಸ್ಥಳಕ್ಕೆ ಬಂದ ಪಿಎಸ್ಐ ರಾಘವೇಂದ್ರ ಖೋತ, ಅಂತರ ಕಾಯ್ದುಕೊಳ್ಳಬೇಕು ಹಾಗೂ ಕೋವಿಡ್ ಮಾರ್ಗಸೂಚಿ ಪಾಲಿಸಬೇಕು ಎಂದು ಜನರಿಗೆ ಸೂಚಿಸಿದರು.</p>.<p>‘ನಿಯಮ ಉಲ್ಲಂಘಿಸಿದ ಬಗ್ಗೆ ದೂರು ಬಂದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಗಳಖೋಡ (ಬೆಳಗಾವಿ ಜಿಲ್ಲೆ):</strong> ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಲಸಿಕೆ ಪಡೆಯಲು ಜನರು ಅಂತರವನ್ನೂ ಮರೆತು ಶುಕ್ರವಾರ ಮುಗಿಬಿದ್ದರು.</p>.<p>‘ಕೋವಿಡ್ ನಿಯಮ ಉಲ್ಲಂಘನೆ ಆಗದಂತೆ ಸರದಿ ಸಾಲಿನಲ್ಲಿ ಬನ್ನಿರಿ’ ಎಂದು ಮನವಿ ಮಾಡಿದ ಆಸ್ಪತ್ರೆಯ ಸಿಬ್ಬಂದಿ ಜೊತೆ ಕೆಲವರು ವಾಗ್ವಾದ ನಡೆಸಿದರು.</p>.<p>ಲಸಿಕೆಗಾಗಿ ಬಹಳಷ್ಟು ಮಂದಿ ಬರುತ್ತಿದ್ದಾರೆ. ಆದರೆ, ಅವರೆಲ್ಲರಿಗೂ ಲಸಿಕೆ ಸಿಗುತ್ತಿಲ್ಲ.</p>.<p>‘ನಿತ್ಯ 100 ಮಂದಿಗೆ ಟೋಕನ್ ಕೊಟ್ಟು ಲಸಿಕೆ ನೀಡಲಾಗುತ್ತಿದೆ. ಆದರೂ ಸಾರ್ವಜನಿಕರ ನಿಯಂತ್ರಣ ಸಾಧ್ಯವಾಗುತ್ತಿಲ್ಲ. ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಜುಲೈ 17ರಿಂದ ವ್ಯವಸ್ಥೆ ಮಾಡಲಾಗುವುದು’ ಎಂದು ವೈದ್ಯಾಧಿಕಾರಿ ಎಸ್.ಎಂ. ಪಾಟೀಲ ಹೇಳಿದರು.</p>.<p>ಜನರನ್ನು ನಿಯಂತ್ರಿಸಲು ಸಾಧ್ಯವಾಗದಿದ್ದಾಗ ಸಿಬ್ಬಂದಿಯು ಹಾರೂಗೇರಿ ಪೋಲಿಸ್ ಠಾಣೆಗೆ ವಿಷಯ ತಿಳಿಸಿದರು.</p>.<p>ಸ್ಥಳಕ್ಕೆ ಬಂದ ಪಿಎಸ್ಐ ರಾಘವೇಂದ್ರ ಖೋತ, ಅಂತರ ಕಾಯ್ದುಕೊಳ್ಳಬೇಕು ಹಾಗೂ ಕೋವಿಡ್ ಮಾರ್ಗಸೂಚಿ ಪಾಲಿಸಬೇಕು ಎಂದು ಜನರಿಗೆ ಸೂಚಿಸಿದರು.</p>.<p>‘ನಿಯಮ ಉಲ್ಲಂಘಿಸಿದ ಬಗ್ಗೆ ದೂರು ಬಂದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>