<p><strong>ಉಗರಗೋಳ (ಸವದತ್ತಿ ತಾ.): </strong>ಈ ಊರಲ್ಲಿ ಮುಸ್ಲಿಂ ಕುಟುಂಬಗಳಿಲ್ಲ. ಆದರೆ, ಪ್ರತಿ ವರ್ಷ ಇಲ್ಲಿ ಮೊಹರಂ ಹಬ್ಬದ ಆಚರಣೆ ನಡೆಯುವುದು ವಿಶೇಷ. ಪಂಜಾ ಪ್ರತಿಷ್ಠಾಪಣೆಯಿಂದ ಹಿಡಿದು ಎಲ್ಲ ಧಾರ್ಮಿಕ ಆಚರಣೆಗಳನ್ನು ಕೈಗೊಳ್ಳುವವರು ಹಿಂದೂಗಳೆ. ಭಾವ್ಯಕೈ ಸಾರುತ್ತಾ ಸಮಾಜದಲ್ಲಿ ಸಾಮರಸ್ಯ ಮೂಡಿಸುತ್ತಿರುವುದು ಸವದತ್ತಿ ತಾಲ್ಲೂಕಿನ ಹರ್ಲಾಪೂರ ಗ್ರಾಮ.</p>.<p>ಸದ್ಯ 3,500 ಜನಸಂಖ್ಯೆ ಹೊಂದಿರುವ ಈ ಗ್ರಾಮದಲ್ಲಿ 50 ವರ್ಷಗಳಿಂದಲೂ ಮೊಹರಂ ಹಬ್ಬವನ್ನು ಸಂಭ್ರಮದಿಂದ ಆಚರಿಸಿಕೊಂಡು ಬರಲಾಗುತ್ತಿದೆ. 11 ವರ್ಷಗಳ ಹಿಂದೆ ಗ್ರಾಮದಲ್ಲಿನ ಹಿಂದೂಗಳೆ ಸೇರಿ ಹಣ ಸಂಗ್ರಹಿಸಿ ಫಕ್ಕಿರೇಶ್ವರ ಧಾರ್ಮಿಕ ಕೇಂದ್ರ ನಿರ್ಮಿಸಿದ್ದಾರೆ. ಪ್ರತಿ ವರ್ಷ ಅದೇ ಕೇಂಧ್ರದಲ್ಲಿ ಪಂಜಾ ಪ್ರತಿಷ್ಠಾಪಿಸುತ್ತಾ ಬಂದಿದ್ದಾರೆ. ಈ ವರ್ಷವೂ ಆಚರಣೆ ನಡೆಯಲಿದೆ. ಆದರೆ, ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಸರಳವಾಗಿ ಸಂಪ್ರದಾಯದಂತೆ ಹಬ್ಬ ಆಚರಿಸುತ್ತಿದ್ದಾರೆ. ಸರ್ಕಾರದ ಆದೇಶದಂತೆ ಕೋವಿಡ್-19 ಮಾರ್ಗಸೂಚಿ ಪಾಲಿಸಿ ಧಾರ್ಮಿಕ ವಿಧಿವಿಧಾನಗಳನ್ನು ಕೈಗೊಳ್ಳುತ್ತಿದ್ದಾರೆ.</p>.<p>ಗುರುವಾರ(ಆ.19) ಮೊಹರಂ ಕಡೆ ದಿನವಾಗಿದ್ದು, ಧಾರ್ಮಿಕ ಆಚರಣೆಯನ್ನು ಸರಳವಾಗಿ ನಡೆಸಲು ತೀರ್ಮಾನಿಸಿದ್ದಾರೆ. ದೇಶವು ಕೊರೊನಾದಿಂದ ಮುಕ್ತವಾಗಲಿ ಮತ್ತು ರೈತರು, ಕೂಲಿ ಕಾರ್ಮಿಕರು ಹಾಗೂ ಜನಸಾಮಾನ್ಯರ ಬದುಕು ಸಮೃದ್ಧಿಯಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ. ಇಲ್ಲಿನ ದೇವರು ಇಷ್ಟಾರ್ಥಗಳನ್ನು ಈಡೇರಿಸುತ್ತದೆ ಎಂಬ ನಂಬಿಕೆ ಗ್ರಾಮಸ್ಥರದು ಹಾಗೂ ಭಕ್ತರದಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಗರಗೋಳ (ಸವದತ್ತಿ ತಾ.): </strong>ಈ ಊರಲ್ಲಿ ಮುಸ್ಲಿಂ ಕುಟುಂಬಗಳಿಲ್ಲ. ಆದರೆ, ಪ್ರತಿ ವರ್ಷ ಇಲ್ಲಿ ಮೊಹರಂ ಹಬ್ಬದ ಆಚರಣೆ ನಡೆಯುವುದು ವಿಶೇಷ. ಪಂಜಾ ಪ್ರತಿಷ್ಠಾಪಣೆಯಿಂದ ಹಿಡಿದು ಎಲ್ಲ ಧಾರ್ಮಿಕ ಆಚರಣೆಗಳನ್ನು ಕೈಗೊಳ್ಳುವವರು ಹಿಂದೂಗಳೆ. ಭಾವ್ಯಕೈ ಸಾರುತ್ತಾ ಸಮಾಜದಲ್ಲಿ ಸಾಮರಸ್ಯ ಮೂಡಿಸುತ್ತಿರುವುದು ಸವದತ್ತಿ ತಾಲ್ಲೂಕಿನ ಹರ್ಲಾಪೂರ ಗ್ರಾಮ.</p>.<p>ಸದ್ಯ 3,500 ಜನಸಂಖ್ಯೆ ಹೊಂದಿರುವ ಈ ಗ್ರಾಮದಲ್ಲಿ 50 ವರ್ಷಗಳಿಂದಲೂ ಮೊಹರಂ ಹಬ್ಬವನ್ನು ಸಂಭ್ರಮದಿಂದ ಆಚರಿಸಿಕೊಂಡು ಬರಲಾಗುತ್ತಿದೆ. 11 ವರ್ಷಗಳ ಹಿಂದೆ ಗ್ರಾಮದಲ್ಲಿನ ಹಿಂದೂಗಳೆ ಸೇರಿ ಹಣ ಸಂಗ್ರಹಿಸಿ ಫಕ್ಕಿರೇಶ್ವರ ಧಾರ್ಮಿಕ ಕೇಂದ್ರ ನಿರ್ಮಿಸಿದ್ದಾರೆ. ಪ್ರತಿ ವರ್ಷ ಅದೇ ಕೇಂಧ್ರದಲ್ಲಿ ಪಂಜಾ ಪ್ರತಿಷ್ಠಾಪಿಸುತ್ತಾ ಬಂದಿದ್ದಾರೆ. ಈ ವರ್ಷವೂ ಆಚರಣೆ ನಡೆಯಲಿದೆ. ಆದರೆ, ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಸರಳವಾಗಿ ಸಂಪ್ರದಾಯದಂತೆ ಹಬ್ಬ ಆಚರಿಸುತ್ತಿದ್ದಾರೆ. ಸರ್ಕಾರದ ಆದೇಶದಂತೆ ಕೋವಿಡ್-19 ಮಾರ್ಗಸೂಚಿ ಪಾಲಿಸಿ ಧಾರ್ಮಿಕ ವಿಧಿವಿಧಾನಗಳನ್ನು ಕೈಗೊಳ್ಳುತ್ತಿದ್ದಾರೆ.</p>.<p>ಗುರುವಾರ(ಆ.19) ಮೊಹರಂ ಕಡೆ ದಿನವಾಗಿದ್ದು, ಧಾರ್ಮಿಕ ಆಚರಣೆಯನ್ನು ಸರಳವಾಗಿ ನಡೆಸಲು ತೀರ್ಮಾನಿಸಿದ್ದಾರೆ. ದೇಶವು ಕೊರೊನಾದಿಂದ ಮುಕ್ತವಾಗಲಿ ಮತ್ತು ರೈತರು, ಕೂಲಿ ಕಾರ್ಮಿಕರು ಹಾಗೂ ಜನಸಾಮಾನ್ಯರ ಬದುಕು ಸಮೃದ್ಧಿಯಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ. ಇಲ್ಲಿನ ದೇವರು ಇಷ್ಟಾರ್ಥಗಳನ್ನು ಈಡೇರಿಸುತ್ತದೆ ಎಂಬ ನಂಬಿಕೆ ಗ್ರಾಮಸ್ಥರದು ಹಾಗೂ ಭಕ್ತರದಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>