<p><strong>ಬೈಲಹೊಂಗಲ</strong>: ಸರ್ವಧರ್ಮ ಸಮನ್ವಯದ ಸಂದೇಶ ಸಾರುವ ಮೊಹರಂ ಹಬ್ಬದ ಸಂಭ್ರಮದ ಆಚರಣೆಗಾಗಿ ತಾಲ್ಲೂಕಿನ ವಕ್ಕುಂದ ಗ್ರಾಮದಲ್ಲಿ ಈಗಾಗಲೇ ತಯಾರಿ ಶುರುವಾಗಿದೆ.</p>.<p>ವಾಲ್ಮೀಕಿ ಸಮಾಜದ ಯುವ ಪಡೆ ಹಾಗೂ ಎಲ್ಲ ಸಮಾಜದವರು ಸೇರಿಕೊಂಡು ಹಬ್ಬದ ಆಚರಣೆಗೆ ಭರದ ಸಿದ್ಧತೆ ನಡೆಸಿದ್ದಾರೆ.</p>.<p>ಚಿನಕೋಲು, ಹುಲಿಕುಣಿತದ ತಯಾರಿ: ವಾಲ್ಮೀಕಿ ಸಮಾಜದ ಯುವ ಪಡೆಯ 20ಕ್ಕೂ ಹೆಚ್ಚಿನ ಜನ ಸದಸ್ಯರು ಕಾಲಿಗೆ ಗೆಜ್ಜೆ ಕಟ್ಟಿಕೊಂಡು, ಹಿರಿಯರ ಮಾರ್ಗದರ್ಶನದಂತೆ ಮೊಹರಂ ಗೀತೆಗಳಿಗೆ ಹೆಜ್ಜೆ ಹಾಕುತ್ತಿದ್ದಾರೆ. </p>.<p>ವಕ್ಕುಂದದ ಸುತ್ತಲಿನ ಜನರೂ ಮೊಹರಂ ತಯಾರಿಯ ಸೊಬಗು ಕಾರಣ ಗ್ರಾಮಕ್ಕೆ ಬರುತ್ತಿದ್ದಾರೆ. ಜುಲೈ 17ರಂದು ಹಬ್ಬದ ಆಚರಣೆಯಲ್ಲಿ ಹುಲಿಕುಣಿತ, ಹಲಗೆ ವಾದನ, ಮೊಹರಂ ಪದಗಳ ಜನರನ್ನು ಆಕರ್ಷಿಸಲಿವೆ. </p>.<div><blockquote>ಮೊದಲಿನಿಂದ ಗ್ರಾಮದ ಎಲ್ಲ ಸಮಾಜದವರು ಸೇರಿ ಮೊಹರಂ ಆಚರಿಸುತ್ತೇವೆ. ಎಲ್ಲರೂ ಒಗ್ಗೂಡಿ ಹಬ್ಬ ಆಚರಿಸುವುದರ ಸಂಭ್ರಮವೇ ಬೇರೆ.</blockquote><span class="attribution">ನಾಗಪ್ಪ ಹೊಸೂರ, ಚಿನಕೋಲ ತಂಡದ ಸದಸ್ಯ</span></div>.<p>ಚಿನಕೋಲು ಮಜಲಿನ ಹಿರಿಯರಾದ ಭೀಮಪ್ಪ ಹಲ್ಕಿ, ಈರಪ್ಪ ತಲ್ಲೂರ, ಹುಸೇನ್ ನನ್ನೆಖಾನ, ಸಿದ್ದಪ್ಪ ಪೂಜೇರಿ, ವಾದ್ಯಮೇಳದ ಶಂಕರ ಚಿಮ್ಮಕ್ಕಿ, ಯಮನಪ್ಪ ಚಿಮ್ಮಕ್ಕಿ, ಗಾಯಕರಾದ ಮಡಿವಾಳಪ್ಪ ತಳವಾರ, ರುದ್ರಪ್ಪ ಹೊಸೂರ, ರಾಮಪ್ಪ ಸುರಪುರ ಅವರು ಯುವಕರಿಗೆ ಮಾರ್ಗದರ್ಶನ ನೀಡಿ, ತಯಾರಿ ಮಾಡುತ್ತಿದ್ದಾರೆ.</p>.<p>‘ವಿಶ್ವದಾದ್ಯಂತ ಮೊಹರಂ ಹಬ್ಬವನ್ನು ಜಾತಿ ಭೇದವಿಲ್ಲದೆ ಆಚರಿಸಲಾಗುತ್ತದೆ. ಸರ್ವಧರ್ಮೀಯರು ಆಚರಿಸುವ ವೈಶಿಷ್ಟ ಹಬ್ಬವಿದು. ಅಲಾಯಿ ಹಬ್ಬ ಅಂತಲೂ ಕರೆಯುತ್ತಾರೆ. ನಮ್ಮ ಪೂರ್ವಜರ ಕಾಲದಿಂದಲೂ ಚಿನಕೋಲು, ಹುಲಿಕುಣಿತ ಪ್ರಮುಖ ಆಕರ್ಷಣೆಯಾಗಿದೆ’ ಎಂದು ಹಿರಿಯ ಭೀಮಪ್ಪ ಹಲ್ಕಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೈಲಹೊಂಗಲ</strong>: ಸರ್ವಧರ್ಮ ಸಮನ್ವಯದ ಸಂದೇಶ ಸಾರುವ ಮೊಹರಂ ಹಬ್ಬದ ಸಂಭ್ರಮದ ಆಚರಣೆಗಾಗಿ ತಾಲ್ಲೂಕಿನ ವಕ್ಕುಂದ ಗ್ರಾಮದಲ್ಲಿ ಈಗಾಗಲೇ ತಯಾರಿ ಶುರುವಾಗಿದೆ.</p>.<p>ವಾಲ್ಮೀಕಿ ಸಮಾಜದ ಯುವ ಪಡೆ ಹಾಗೂ ಎಲ್ಲ ಸಮಾಜದವರು ಸೇರಿಕೊಂಡು ಹಬ್ಬದ ಆಚರಣೆಗೆ ಭರದ ಸಿದ್ಧತೆ ನಡೆಸಿದ್ದಾರೆ.</p>.<p>ಚಿನಕೋಲು, ಹುಲಿಕುಣಿತದ ತಯಾರಿ: ವಾಲ್ಮೀಕಿ ಸಮಾಜದ ಯುವ ಪಡೆಯ 20ಕ್ಕೂ ಹೆಚ್ಚಿನ ಜನ ಸದಸ್ಯರು ಕಾಲಿಗೆ ಗೆಜ್ಜೆ ಕಟ್ಟಿಕೊಂಡು, ಹಿರಿಯರ ಮಾರ್ಗದರ್ಶನದಂತೆ ಮೊಹರಂ ಗೀತೆಗಳಿಗೆ ಹೆಜ್ಜೆ ಹಾಕುತ್ತಿದ್ದಾರೆ. </p>.<p>ವಕ್ಕುಂದದ ಸುತ್ತಲಿನ ಜನರೂ ಮೊಹರಂ ತಯಾರಿಯ ಸೊಬಗು ಕಾರಣ ಗ್ರಾಮಕ್ಕೆ ಬರುತ್ತಿದ್ದಾರೆ. ಜುಲೈ 17ರಂದು ಹಬ್ಬದ ಆಚರಣೆಯಲ್ಲಿ ಹುಲಿಕುಣಿತ, ಹಲಗೆ ವಾದನ, ಮೊಹರಂ ಪದಗಳ ಜನರನ್ನು ಆಕರ್ಷಿಸಲಿವೆ. </p>.<div><blockquote>ಮೊದಲಿನಿಂದ ಗ್ರಾಮದ ಎಲ್ಲ ಸಮಾಜದವರು ಸೇರಿ ಮೊಹರಂ ಆಚರಿಸುತ್ತೇವೆ. ಎಲ್ಲರೂ ಒಗ್ಗೂಡಿ ಹಬ್ಬ ಆಚರಿಸುವುದರ ಸಂಭ್ರಮವೇ ಬೇರೆ.</blockquote><span class="attribution">ನಾಗಪ್ಪ ಹೊಸೂರ, ಚಿನಕೋಲ ತಂಡದ ಸದಸ್ಯ</span></div>.<p>ಚಿನಕೋಲು ಮಜಲಿನ ಹಿರಿಯರಾದ ಭೀಮಪ್ಪ ಹಲ್ಕಿ, ಈರಪ್ಪ ತಲ್ಲೂರ, ಹುಸೇನ್ ನನ್ನೆಖಾನ, ಸಿದ್ದಪ್ಪ ಪೂಜೇರಿ, ವಾದ್ಯಮೇಳದ ಶಂಕರ ಚಿಮ್ಮಕ್ಕಿ, ಯಮನಪ್ಪ ಚಿಮ್ಮಕ್ಕಿ, ಗಾಯಕರಾದ ಮಡಿವಾಳಪ್ಪ ತಳವಾರ, ರುದ್ರಪ್ಪ ಹೊಸೂರ, ರಾಮಪ್ಪ ಸುರಪುರ ಅವರು ಯುವಕರಿಗೆ ಮಾರ್ಗದರ್ಶನ ನೀಡಿ, ತಯಾರಿ ಮಾಡುತ್ತಿದ್ದಾರೆ.</p>.<p>‘ವಿಶ್ವದಾದ್ಯಂತ ಮೊಹರಂ ಹಬ್ಬವನ್ನು ಜಾತಿ ಭೇದವಿಲ್ಲದೆ ಆಚರಿಸಲಾಗುತ್ತದೆ. ಸರ್ವಧರ್ಮೀಯರು ಆಚರಿಸುವ ವೈಶಿಷ್ಟ ಹಬ್ಬವಿದು. ಅಲಾಯಿ ಹಬ್ಬ ಅಂತಲೂ ಕರೆಯುತ್ತಾರೆ. ನಮ್ಮ ಪೂರ್ವಜರ ಕಾಲದಿಂದಲೂ ಚಿನಕೋಲು, ಹುಲಿಕುಣಿತ ಪ್ರಮುಖ ಆಕರ್ಷಣೆಯಾಗಿದೆ’ ಎಂದು ಹಿರಿಯ ಭೀಮಪ್ಪ ಹಲ್ಕಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>