ಇಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ರಮೇಶ ಜಾರಕಿಹೊಳಿ ವಿರುದ್ಧದ ಸಿ.ಡಿ. ಪ್ರಕರಣದ ಹಿಂದೆ ಷಡ್ಯಂತ್ರವಿದೆ. ಅವರು ಪ್ರಭಾವಿ ರಾಜಕಾರಣಿ ಆಗಿದ್ದಾರೆ. ಜೆಡಿಎಸ್–ಕಾಂಗ್ರೆಸ್ ಸಮ್ಮಶ್ರ ಸರ್ಕಾರ ಬೀಳಿಸಿ, ಬಿಜೆಪಿ ಸರ್ಕಾರ ರಚನೆಯಲ್ಲಿ ದೊಡ್ಡ ಪಾತ್ರ ವಹಿಸಿದ್ದರು. ಹೀಗೆಯೇ ಬೆಳೆದರೆ ಮುಂದೆ ಮುಖ್ಯಮಂತ್ರಿ ಆಗುತ್ತಾರೆಂದು ಅವರ ವಿರುದ್ಧ ಷಡ್ಯಂತ್ರಕ್ಕೆ ದೊಡ್ಡ ಜಾಲವೇ ಕೆಲಸ ಮಾಡಿದೆ. ಹೀಗಾಗಿ ಅವರು ಬಲಿಪಶು ಆಗಿದ್ದಾರೆ’ ಎಂದು ತಿಳಿಸಿದರು.