<p><strong>ಬೆಳಗಾವಿ: </strong>ಸವದತ್ತಿ ತಾಲ್ಲೂಕಿನ ಮುನವಳ್ಳಿ ಪುರಸಭೆಯ ಕಿರಿಯ ಎಂಜಿನಿಯರ್ ವೆಂಕಪ್ಪ ಕಾಮಣ್ಣವರ ಅವರು ಗುತ್ತಿಗೆದಾರರೊಬ್ಬರಿಂದ ಲಂಚ ಪಡೆಯುವಾಗ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಲೆಗೆ ಶುಕ್ರವಾರ ಬಿದ್ದಿದ್ದಾರೆ.</p>.<p>ಎಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ, ಲಂಚದ ಹಣದ ಸಮೇತ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.</p>.<p>ವೆಂಕಪ್ಪ ಅವರು ಮುನವಳ್ಳಿಯ ಗುತ್ತಿಗೆದಾರ ದುರ್ಗಪ್ಪ ಕಿನ್ನೂರಿ ಎನ್ನುವವರಿಂದ ₹ 80ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ.</p>.<p>‘ಮುನವಳ್ಳಿ ಪುರಸಭೆ ವ್ಯಾಪ್ತಿಯಲ್ಲಿ ಕೈಗೊಂಡ ಕಾಮಗಾರಿಯ ಬಿಲ್ ಮಂಜೂರು ಮಾಡುವ ಕಾಲಕ್ಕೆ ಶೇ 5ರಷ್ಟು ಲಂಚದ ಬೇಡಿಕೆ ಇಟ್ಟಿದ್ದರು. ಕೊನೆಗೆ ಶೇ 4ರಷ್ಟು ಲಂಚ ನೀಡುವಂತೆ ತಿಳಿಸಿ ₹ 60ಸಾವಿರವನ್ನು ಮೊದಲೇ ಪಡೆದು ಬಿಲ್ ನೀಡಿದ್ದರು. ಹೊಸದಾಗಿ ನಿರ್ವಹಿಸಿದ ನಾಲ್ಕು ಕಾಮಗಾರಿಗಳನ್ನು ಪರಿಶೀಲಿಸಿ, ಪೂರ್ಣಗೊಂಡ ಬಗ್ಗೆ ದೃಢೀಕರಿಸಿ ಬಿಲ್ಗಳನ್ನು ಮಂಜೂರು ಮಾಡುವ ಮೊದಲು ₹80 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಗುತ್ತಿಗೆದಾರ ದೂರು ನೀಡಿದ್ದರು. ಇದನ್ನು ಆಧರಿಸಿ ಕಾರ್ಯಾಚರಣೆ ನಡೆಸಲಾಗಿದೆ’ ಎಂದು ಎಸಿಬಿ ಪೊಲೀಸರು ತಿಳಿಸಿದ್ದಾರೆ.</p>.<p>ಎಸಿಬಿ ಎಸ್ಪಿ ಬಿ.ಎಸ್. ನೇಮಗೌಡರ ಮಾರ್ಗದರ್ಶನದಲ್ಲಿ, ಡಿವೈಎಸ್ಪಿ ಮಹಾಂತೇಶ್ವರ ಜಿದ್ದಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ಸ್ಪೆಕ್ಟರ್ಗಳಾದ ಎ.ಎಸ್. ಗೂದಿಗೊಪ್ಪ ಹಾಗೂ ಎಚ್. ಸುನೀಲ್ಕುಮಾರ್ ಮತ್ತು ಸಿಬ್ಬಂದಿ ದಾಳಿ ನಡೆಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ಸವದತ್ತಿ ತಾಲ್ಲೂಕಿನ ಮುನವಳ್ಳಿ ಪುರಸಭೆಯ ಕಿರಿಯ ಎಂಜಿನಿಯರ್ ವೆಂಕಪ್ಪ ಕಾಮಣ್ಣವರ ಅವರು ಗುತ್ತಿಗೆದಾರರೊಬ್ಬರಿಂದ ಲಂಚ ಪಡೆಯುವಾಗ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಲೆಗೆ ಶುಕ್ರವಾರ ಬಿದ್ದಿದ್ದಾರೆ.</p>.<p>ಎಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ, ಲಂಚದ ಹಣದ ಸಮೇತ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.</p>.<p>ವೆಂಕಪ್ಪ ಅವರು ಮುನವಳ್ಳಿಯ ಗುತ್ತಿಗೆದಾರ ದುರ್ಗಪ್ಪ ಕಿನ್ನೂರಿ ಎನ್ನುವವರಿಂದ ₹ 80ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ.</p>.<p>‘ಮುನವಳ್ಳಿ ಪುರಸಭೆ ವ್ಯಾಪ್ತಿಯಲ್ಲಿ ಕೈಗೊಂಡ ಕಾಮಗಾರಿಯ ಬಿಲ್ ಮಂಜೂರು ಮಾಡುವ ಕಾಲಕ್ಕೆ ಶೇ 5ರಷ್ಟು ಲಂಚದ ಬೇಡಿಕೆ ಇಟ್ಟಿದ್ದರು. ಕೊನೆಗೆ ಶೇ 4ರಷ್ಟು ಲಂಚ ನೀಡುವಂತೆ ತಿಳಿಸಿ ₹ 60ಸಾವಿರವನ್ನು ಮೊದಲೇ ಪಡೆದು ಬಿಲ್ ನೀಡಿದ್ದರು. ಹೊಸದಾಗಿ ನಿರ್ವಹಿಸಿದ ನಾಲ್ಕು ಕಾಮಗಾರಿಗಳನ್ನು ಪರಿಶೀಲಿಸಿ, ಪೂರ್ಣಗೊಂಡ ಬಗ್ಗೆ ದೃಢೀಕರಿಸಿ ಬಿಲ್ಗಳನ್ನು ಮಂಜೂರು ಮಾಡುವ ಮೊದಲು ₹80 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಗುತ್ತಿಗೆದಾರ ದೂರು ನೀಡಿದ್ದರು. ಇದನ್ನು ಆಧರಿಸಿ ಕಾರ್ಯಾಚರಣೆ ನಡೆಸಲಾಗಿದೆ’ ಎಂದು ಎಸಿಬಿ ಪೊಲೀಸರು ತಿಳಿಸಿದ್ದಾರೆ.</p>.<p>ಎಸಿಬಿ ಎಸ್ಪಿ ಬಿ.ಎಸ್. ನೇಮಗೌಡರ ಮಾರ್ಗದರ್ಶನದಲ್ಲಿ, ಡಿವೈಎಸ್ಪಿ ಮಹಾಂತೇಶ್ವರ ಜಿದ್ದಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ಸ್ಪೆಕ್ಟರ್ಗಳಾದ ಎ.ಎಸ್. ಗೂದಿಗೊಪ್ಪ ಹಾಗೂ ಎಚ್. ಸುನೀಲ್ಕುಮಾರ್ ಮತ್ತು ಸಿಬ್ಬಂದಿ ದಾಳಿ ನಡೆಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>