‘2015ರ ಸೆ.24ರಂದು ರಾತ್ರಿ 10.30ರ ಸುಮಾರಿಗೆ ಘಟನೆ ನಡೆದಿತ್ತು. ಇವರಿಬ್ಬರೂ ಸೇರಿ ಮಹಮ್ಮದರಸೂಲ ಬಾಬಾಸಾಬ ಶೇಖ ಎನ್ನುವವರನ್ನು ಕೊಲೆ ಮಾಡಿದ್ದರು. ಮಹಮ್ಮದರಸೂಲ ಅವರಿಂದ ಜಮೀರ ಆಟೊರಿಕ್ಷಾ ಬಾಡಿಗೆಗೆ ಪಡೆದಿದ್ದ. ಜಾಂಬೋಟಿ ಕಡೆಯಿಂದ ಬರುವಾಗ ಅಪಘಾತ ಮಾಡಿ ನಷ್ಟ ಉಂಟು ಮಾಡಿದ್ದ. ದುರಸ್ತಿ ಮಾಡಿಸಿಕೊಡುವಂತೆ ಕೇಳಿದ್ದರು. ಇದರಿಂದ ಸಿಟ್ಟಾದ ಜಮೀರ ತನ್ನ ಸ್ನೇಹಿತ ಮಹ್ಮದ್ ಜೊತೆ ಸೇರಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದರು. ಈ ಬಗ್ಗೆ ಮೃತರ ಪತ್ನಿ ಮಾಳಮಾರುತಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿದ ಇನ್ಸ್ಪೆಕ್ಟರ್ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶ ವೆಂಕಟೇಶ ರಾಮಕೃಷ್ಣ ರಾವ್ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ’ ಎಂದು ಸರ್ಕಾರದ ಪರವಾಗಿ ವಾದ ಮಂಡಿಸಿದ್ದ ಸರ್ಕಾರಿ ಅಭಿಯೋಜಕ ಆರ್.ಎ. ಬಾರಾವಲಿ ತಿಳಿಸಿದ್ದಾರೆ.