ಸಪ್ತಸ್ವರ ಸಂಗೀತ ವಿದ್ಯಾಲಯದ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕೇದಾರ, ಮಾಲಕಂಸ, ಸಾರಂಗ, ಯಮನ ಮುಂತಾದ ರಾಗಗಳನ್ನು ಪ್ರಸ್ತುತಪಡಿಸಿ, ಭಾವಗೀತೆ, ಭಕ್ತಿಗೀತೆ, ಜನಪದ ಗೀತೆಗಳನ್ನು ಹಾಡಿದರು. ವಾಮನ ವಾಗೂಕರ, ನಿರಂಜನ ಮೂರ್ತಿ, ನಾರಾಯಣ ಗಣಾಚಾರಿ, ಜಿತೇಂದ್ರ ಸಾಬಣ್ಣವರ ಹಾರ್ಮೋನಿಯಂ ಮತ್ತು ತಬಲಾ ಸಾಥ್ ನೀಡಿದರು.