ಪಟ್ಟಣದಲ್ಲಿ ಶನಿವಾರ ಮುಸ್ಲಿಂ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ‘ನನ್ನ ಸ್ವಾಭಿಮಾನಕ್ಕೆ ಧಕ್ಕೆ ಬಂದಿದೆ. ಹೀಗಾಗಿ, ನಾನು ಮಾರ್ಚ್ 27ರಂದು ಎಲ್ಲ ಸಮುದಾಯದವರ ಒಪ್ಪಿಗೆ ಪಡೆದು ಒಂದು ತೀರ್ಮಾನಕ್ಕೆ ಬರುತ್ತಿದ್ದೇನೆ. ಮುಸ್ಲಿಂ ಸಮಾಜದವರ ಅಭಿಪ್ರಾಯವೂ ನನಗೆ ಬೇಕು. ನೀವು ನನಗೆ ಯಾವಾಗಲೂ ಬೆಂಬಲವಾಗಿ ನಿಲ್ಲಬೇಕು’ ಎಂದರು.