<p><strong>ಬೆಳಗಾವಿ</strong>: ನವರಾತ್ರಿ ಅಂಗವಾಗಿ ಶಿವ ಪ್ರತಿಷ್ಠಾನ ಹಿಂದೂಸ್ಥಾನ ವತಿಯಿಂದ 8ನೇ ದಿನವಾದ ಸೋಮವಾರ ದುರ್ಗಾಮಾತಾ ದೌಡ್ ನಡೆಯಿತು. ಇಲ್ಲಿನ ಕ್ಯಾಂಪ್ ಪ್ರದೇಶದಲ್ಲಿ ಮುಸ್ಲಿಮರು ಇದಕ್ಕೆ ಸ್ವಾಗತ ಕೋರಿ, ಭಾವೈಕ್ಯ ಸಂದೇಶ ಸಾರಿದರು.</p>.<p>ದುರ್ಗಾಮಾತಾ ದೌಡ್ ಅಂಗವಾಗಿ ಕ್ಯಾಂಪ್ನ ಮಾರ್ಗಗಳಲ್ಲಿ ರಂಗೋಲಿ ಚಿತ್ತಾರ ಅರಳಿತ್ತು. ಯುವಕ–ಯುವತಿಯರು, ಮಕ್ಕಳು ಸಾಂಪ್ರದಾಯಿಕ ದಿರಿಸಿನಲ್ಲಿ ಗಮನ ಸೆಳೆದರು. ಬಾಲಕಿಯೊಬ್ಬಳು ಜೀಜಾಮಾತಾ ವೇಷ ಧರಿಸಿ, ಶಿವಾಜಿ ಮಹಾರಾಜರನ್ನು ಸ್ತುತಿಸಿದಳು.</p>.<p>ದಂಡು ಮಂಡಳಿ ಮಾಜಿ ಉಪಾಧ್ಯಕ್ಷ ಸಾಜೀದ್ ಶೇಖ್ ದೌಡ್ನಲ್ಲಿ ಪಾಲ್ಗೊಂಡವರಿಗೆ ನೀರು, ಹಣ್ಣು–ಹಂಪಲು ವಿತರಿಸಿದರು. ಬಳಿಕ ಮಾತನಾಡಿ, ‘ನಮ್ಮ ಬಡಾವಣೆಯಲ್ಲಿ ಪ್ರತಿವರ್ಷವೂ ಮುಸ್ಲಿಮರೆಲ್ಲ ಸೇರಿಕೊಂಡು ದುರ್ಗಾಮಾತಾ ದೌಡ್ ಸ್ವಾಗತಿಸುತ್ತೇವೆ. ಭಾವೈಕ್ಯತೆಯಿಂದ ಇಲ್ಲಿ ಎಲ್ಲರೂ ಬಾಳುತ್ತಿದ್ದೇವೆ’ ಎಂದು ತಿಳಿಸಿದರು.</p>.<p>ಬಳಿಕ, ದುರ್ಗಾಮಾತಾ ದೌಡ್ ಕಾಂಗ್ರೆಸ್ ರಸ್ತೆ, ಖಾನಾಪುರ ರಸ್ತೆ, ಧರ್ಮವೀರ ಸಂಭಾಜಿ ಚೌಕ್, ದುರ್ಗಾಮಾತಾ ಮಂದಿರ ಮಾರ್ಗವಾಗಿ ಸಂಚರಿಸಿ ಜತ್ತಿಮಠದ ಬಳಿ ಮುಕ್ತಾಯಗೊಂಡಿತು. ಶಿವ ಪ್ರತಿಷ್ಠಾನ ಹಿಂದೂಸ್ಥಾನ ಅಧ್ಯಕ್ಷ ಕಿರಣ ಗಾವಡೆ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ನವರಾತ್ರಿ ಅಂಗವಾಗಿ ಶಿವ ಪ್ರತಿಷ್ಠಾನ ಹಿಂದೂಸ್ಥಾನ ವತಿಯಿಂದ 8ನೇ ದಿನವಾದ ಸೋಮವಾರ ದುರ್ಗಾಮಾತಾ ದೌಡ್ ನಡೆಯಿತು. ಇಲ್ಲಿನ ಕ್ಯಾಂಪ್ ಪ್ರದೇಶದಲ್ಲಿ ಮುಸ್ಲಿಮರು ಇದಕ್ಕೆ ಸ್ವಾಗತ ಕೋರಿ, ಭಾವೈಕ್ಯ ಸಂದೇಶ ಸಾರಿದರು.</p>.<p>ದುರ್ಗಾಮಾತಾ ದೌಡ್ ಅಂಗವಾಗಿ ಕ್ಯಾಂಪ್ನ ಮಾರ್ಗಗಳಲ್ಲಿ ರಂಗೋಲಿ ಚಿತ್ತಾರ ಅರಳಿತ್ತು. ಯುವಕ–ಯುವತಿಯರು, ಮಕ್ಕಳು ಸಾಂಪ್ರದಾಯಿಕ ದಿರಿಸಿನಲ್ಲಿ ಗಮನ ಸೆಳೆದರು. ಬಾಲಕಿಯೊಬ್ಬಳು ಜೀಜಾಮಾತಾ ವೇಷ ಧರಿಸಿ, ಶಿವಾಜಿ ಮಹಾರಾಜರನ್ನು ಸ್ತುತಿಸಿದಳು.</p>.<p>ದಂಡು ಮಂಡಳಿ ಮಾಜಿ ಉಪಾಧ್ಯಕ್ಷ ಸಾಜೀದ್ ಶೇಖ್ ದೌಡ್ನಲ್ಲಿ ಪಾಲ್ಗೊಂಡವರಿಗೆ ನೀರು, ಹಣ್ಣು–ಹಂಪಲು ವಿತರಿಸಿದರು. ಬಳಿಕ ಮಾತನಾಡಿ, ‘ನಮ್ಮ ಬಡಾವಣೆಯಲ್ಲಿ ಪ್ರತಿವರ್ಷವೂ ಮುಸ್ಲಿಮರೆಲ್ಲ ಸೇರಿಕೊಂಡು ದುರ್ಗಾಮಾತಾ ದೌಡ್ ಸ್ವಾಗತಿಸುತ್ತೇವೆ. ಭಾವೈಕ್ಯತೆಯಿಂದ ಇಲ್ಲಿ ಎಲ್ಲರೂ ಬಾಳುತ್ತಿದ್ದೇವೆ’ ಎಂದು ತಿಳಿಸಿದರು.</p>.<p>ಬಳಿಕ, ದುರ್ಗಾಮಾತಾ ದೌಡ್ ಕಾಂಗ್ರೆಸ್ ರಸ್ತೆ, ಖಾನಾಪುರ ರಸ್ತೆ, ಧರ್ಮವೀರ ಸಂಭಾಜಿ ಚೌಕ್, ದುರ್ಗಾಮಾತಾ ಮಂದಿರ ಮಾರ್ಗವಾಗಿ ಸಂಚರಿಸಿ ಜತ್ತಿಮಠದ ಬಳಿ ಮುಕ್ತಾಯಗೊಂಡಿತು. ಶಿವ ಪ್ರತಿಷ್ಠಾನ ಹಿಂದೂಸ್ಥಾನ ಅಧ್ಯಕ್ಷ ಕಿರಣ ಗಾವಡೆ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>