ಸಮೀಪದ ಅಂಬಡಗಟ್ಟಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಭಾನುವಾರ ಮಾತನಾಡಿದ ಅವರು, ‘ಕೇಂದ್ರ ಸರ್ಕಾರ ಒಳ್ಳೆಯ ಕಾರ್ಯಕ್ರಮ ರೂಪಿಸುತ್ತಿದೆ. ಅದನ್ನು ಮೆಚ್ಚಿ ಪಕ್ಷಕ್ಕೆ ಸೇರಿದ್ದೇನೆ. ಏನು ಬಯಸುತ್ತೀರಿ ಎಂದು ಕೇಳಿದಾಗ ಒಳ್ಳೆಯ ಹುದ್ದೆ ನೀಡಿದರೆ ಕೆಲಸ ಮಾಡುತ್ತೇನೆ ಎಂದು ನಾಯಕರಿಗೆ ತಿಳಿಸಿದ್ದೆ’ ಎಂದು ಹೇಳಿದರು.