<p><strong>ಬೆಳಗಾವಿ: </strong>‘ನಗರದಲ್ಲಿ ನಡೆಯುವ ನಾಡಹಬ್ಬ ಆಚರಣೆಗೆ ರಾಜ್ಯ ಸರ್ಕಾರದಿಂದ ಅನುದಾನ ಕೊಡಿಸಲು ಯತ್ನಿಸುತ್ತೇನೆ’ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಆಂಗಡಿ ಭರಸೆ ನೀಡಿದರು.</p>.<p>ಇಲ್ಲಿನ ಕನ್ನಡ ಸಾಹಿತ್ಯ ಭವನ ಆವರಣದಲ್ಲಿ ಮಂಗಳವಾರ ಆರಂಭವಾದ 92ನೇ ನಾಡಹಬ್ಬ ಉತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಅನೇಕ ಸಂಕಷ್ಟಗಳ ನಡುವೆಯೂ ಗಡಿ ನಾಡಿನಲ್ಲಿ 92 ವರ್ಷಗಳಿಂದ ನಾಡಹಬ್ಬ ಆಚರಿಸುತ್ತಾ ಬಂದಿರುವುದು ಶ್ಲಾಘನೀಯ. ನಾನು ಈ ಸಮಿತಿ ಅಧ್ಯಕ್ಷನಾಗಿ ಆಯ್ಕೆಯಾದ ವರ್ಷವೇ ಸಂಸದನಾದೆ. ಅ. 3ರಂದು ಮುಖ್ಯಮಂತ್ರಿ ಬೆಳಗಾವಿಗೆ ಬರುತ್ತಾರೆ. ಅನುದಾನಕ್ಕೆ ಸಂಬಂಧಿಸಿದಂತೆ ಅವರಿಗೆ ಮನವಿ ಸಲ್ಲಿಸೋಣ’ ಎಂದು ಆಯೋಜಕರಿಗೆ ತಿಳಿಸಿದರು.</p>.<p>‘ನಾಡಹಬ್ಬದಂತಹ ಕಾರ್ಯಕ್ರಮಗಳಲ್ಲಿ ಯುವ ಸಮೂಹ, ಶಾಲಾ–ಕಾಲೇಜು ವಿದ್ಯಾರ್ಥಿ ಹೆಚ್ಚಾಗಿ ಭಾಗವಹಿಸಬೇಕು. ನಾಡಿನ ಪರಂಪರೆಯನ್ನು ಅವರಿಗೆ ಪರಿಚಯಿಸಬೇಕು’ ಎಂದರು.</p>.<p>ಸಾನ್ನಿಧ್ಯ ವಹಿಸಿದ್ದ ತೋಂಟದ ಸಿದ್ಧರಾಮ ಸ್ವಾಮೀಜಿ ಮಾತನಾಡಿ, ‘ಗಡಿಯಲ್ಲಿ ಕನ್ನಡ ಉಳಿಸಿ–ಬೆಳೆಸುವಲ್ಲಿ ನಾಡಹಬ್ಬದ ಪಾತ್ರ ಹಿರಿದಾಗಿದೆ. ಸರ್ಕಾರ ಆರ್ಥಿಕ ನೆರವು ಕೊಟ್ಟು ಸಹಕರಿಸಬೇಕು’ ಎಂದು ಒತ್ತಾಯಿಸಿದರು.</p>.<p>ಡಾ.ಮಹೇಶ್ ಜೋಶಿ, ಸಮಿತಿಯ ಪ್ರಧಾನ ಕಾರ್ಯದರ್ಶಿ ಸಿ.ಕೆ. ಜೋರಾಪುರ ಪ್ರಾಸ್ತಾವಿಕ ಮಾತನಾಡಿದರು.</p>.<p>ಅಧ್ಯಕ್ಷ ಡಾ.ಎಚ್.ಬಿ. ರಾಜಶೇಖರ, ಸಮಾಜ ಸೇವಕಿ ಸರಳಾ ಹೆರೇಕರ, ಡಾ.ಎಚ್.ಐ. ತಿಮ್ಮಾಪುರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>‘ನಗರದಲ್ಲಿ ನಡೆಯುವ ನಾಡಹಬ್ಬ ಆಚರಣೆಗೆ ರಾಜ್ಯ ಸರ್ಕಾರದಿಂದ ಅನುದಾನ ಕೊಡಿಸಲು ಯತ್ನಿಸುತ್ತೇನೆ’ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಆಂಗಡಿ ಭರಸೆ ನೀಡಿದರು.</p>.<p>ಇಲ್ಲಿನ ಕನ್ನಡ ಸಾಹಿತ್ಯ ಭವನ ಆವರಣದಲ್ಲಿ ಮಂಗಳವಾರ ಆರಂಭವಾದ 92ನೇ ನಾಡಹಬ್ಬ ಉತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಅನೇಕ ಸಂಕಷ್ಟಗಳ ನಡುವೆಯೂ ಗಡಿ ನಾಡಿನಲ್ಲಿ 92 ವರ್ಷಗಳಿಂದ ನಾಡಹಬ್ಬ ಆಚರಿಸುತ್ತಾ ಬಂದಿರುವುದು ಶ್ಲಾಘನೀಯ. ನಾನು ಈ ಸಮಿತಿ ಅಧ್ಯಕ್ಷನಾಗಿ ಆಯ್ಕೆಯಾದ ವರ್ಷವೇ ಸಂಸದನಾದೆ. ಅ. 3ರಂದು ಮುಖ್ಯಮಂತ್ರಿ ಬೆಳಗಾವಿಗೆ ಬರುತ್ತಾರೆ. ಅನುದಾನಕ್ಕೆ ಸಂಬಂಧಿಸಿದಂತೆ ಅವರಿಗೆ ಮನವಿ ಸಲ್ಲಿಸೋಣ’ ಎಂದು ಆಯೋಜಕರಿಗೆ ತಿಳಿಸಿದರು.</p>.<p>‘ನಾಡಹಬ್ಬದಂತಹ ಕಾರ್ಯಕ್ರಮಗಳಲ್ಲಿ ಯುವ ಸಮೂಹ, ಶಾಲಾ–ಕಾಲೇಜು ವಿದ್ಯಾರ್ಥಿ ಹೆಚ್ಚಾಗಿ ಭಾಗವಹಿಸಬೇಕು. ನಾಡಿನ ಪರಂಪರೆಯನ್ನು ಅವರಿಗೆ ಪರಿಚಯಿಸಬೇಕು’ ಎಂದರು.</p>.<p>ಸಾನ್ನಿಧ್ಯ ವಹಿಸಿದ್ದ ತೋಂಟದ ಸಿದ್ಧರಾಮ ಸ್ವಾಮೀಜಿ ಮಾತನಾಡಿ, ‘ಗಡಿಯಲ್ಲಿ ಕನ್ನಡ ಉಳಿಸಿ–ಬೆಳೆಸುವಲ್ಲಿ ನಾಡಹಬ್ಬದ ಪಾತ್ರ ಹಿರಿದಾಗಿದೆ. ಸರ್ಕಾರ ಆರ್ಥಿಕ ನೆರವು ಕೊಟ್ಟು ಸಹಕರಿಸಬೇಕು’ ಎಂದು ಒತ್ತಾಯಿಸಿದರು.</p>.<p>ಡಾ.ಮಹೇಶ್ ಜೋಶಿ, ಸಮಿತಿಯ ಪ್ರಧಾನ ಕಾರ್ಯದರ್ಶಿ ಸಿ.ಕೆ. ಜೋರಾಪುರ ಪ್ರಾಸ್ತಾವಿಕ ಮಾತನಾಡಿದರು.</p>.<p>ಅಧ್ಯಕ್ಷ ಡಾ.ಎಚ್.ಬಿ. ರಾಜಶೇಖರ, ಸಮಾಜ ಸೇವಕಿ ಸರಳಾ ಹೆರೇಕರ, ಡಾ.ಎಚ್.ಐ. ತಿಮ್ಮಾಪುರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>