ಮುಖ್ಯಅತಿಥಿಯಾಗಿದ್ದ ಸಂಪನ್ಮೂಲ ವ್ಯಕ್ತಿ ಪರಮೇಶ್ವರ ಹೆಗಡೆ ಮಾತನಾಡಿ, ‘ನಾಗಪಂಚಮಿಯೂ ನಾಡಿಗೆ ದೊಡ್ಡ ಹಬ್ಬವಾಗಿದೆ. ಭಾರತೀಯ ಸಂಸ್ಕೃತಿ ಪ್ರಕಾರ, ಪ್ರತಿ ಹಬ್ಬಕ್ಕೂ ತನ್ನದೇ ಆದ ಮಹತ್ವವಿದೆ. ಇದನ್ನು ಯುವಪೀಳಿಗೆ ಅರಿತುಕೊಳ್ಳಬೇಕು. ಸಂಸ್ಕೃತಿಯನ್ನು ಉಳಿಸಿಕೊಂಡು, ಆಚರಣೆಗಳ ಮಹತ್ವವನ್ನು ಸಾರಬೇಕು’ ಎಂದು ತಿಳಿಸಿದರು.