<p><strong>ಬೆಳಗಾವಿ:</strong> ‘ಸುರೇಶ ಅಂಗಡಿ ಅವರ ಕುಟುಂಬದ ಜೊತೆ ಇಡೀ ಪಕ್ಷ ನಿಲ್ಲಲಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.</p>.<p>ಇಲ್ಲಿ ಮಂಗಳವಾರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.</p>.<p>‘ಸುರೇಶ ಅಂಗಡಿ ಮಾರ್ಗದರ್ಶಕರಾಗಿ ಹಿರಿಯ ಅಣ್ಣನಂತಿದ್ದರು. ಅವರು ನಿಧನರಾದಾಗ ನಾನು ಕ್ವಾರೆಂಟೈನ್ನಲ್ಲಿದ್ದೆ. ಹೀಗಾಗಿ ಆಗ ಬರಲು ಆಗಿರಲಿಲ್ಲ’ ಎಂದರು.</p>.<p>‘ಮುಂಬೈ ಕರ್ನಾಟಕ ಭಾಗದಲ್ಲಿ ಒಬ್ಬ ಪ್ರಭಾವಶಾಲಿ ನಾಯಕರಾಗಿದ್ದ ಅಂಗಡಿ. ಈ ಭಾಗದಲ್ಲಿ ಪಕ್ಷವನ್ನು ಕಟ್ಟಿ ಬೆಳಸಿದವರು. ಪಕ್ಷ ನಿಷ್ಠೆ, ಸಿದ್ಧಾಂತವನ್ನು ಅವರಿಂದ ಕಲಿಯಬೇಕು ರೈಲ್ವೆ ಖಾತೆ ರಾಜ್ಯ ಸಚಿವರಾದ ಬಳಿಕ ಹತ್ತಾರು ಸಚಿವರು ಮಾಡಿದ್ದಕ್ಕಿಂತ ಹೆಚ್ಚು ಹಾಗೂ<br />ಅತಿ ಹೆಚ್ಚು ಅನುದಾನವನ್ನು ರಾಜ್ಯಕ್ಕೆ ತಂದಿದ್ದಾರೆ’ ಎಂದು ಸ್ಮರಿಸಿದರು.</p>.<p>‘ಸುರೇಶ ಅಂಗಡಿ ಸ್ಮಾರಕ ಮತ್ತು ಬೆಳಗಾವಿ- ಯಶವಂತಪುರ ರೈಲಿಗೆ ಅವರ ಹೆಸರು ಇಡುವ ವಿಚಾರ ಸರ್ಕಾರದ ಮುಂದೆ ಇದೆ. ಪರಿಶೀಲನೆ ಮಾಡುತ್ತೇವೆ’ ಎಂದು ಹೇಳಿದರು. ನಂತರ ಕುಟುಂಬದವರಿಗೆ ಸಾಂತ್ವನ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಸುರೇಶ ಅಂಗಡಿ ಅವರ ಕುಟುಂಬದ ಜೊತೆ ಇಡೀ ಪಕ್ಷ ನಿಲ್ಲಲಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.</p>.<p>ಇಲ್ಲಿ ಮಂಗಳವಾರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.</p>.<p>‘ಸುರೇಶ ಅಂಗಡಿ ಮಾರ್ಗದರ್ಶಕರಾಗಿ ಹಿರಿಯ ಅಣ್ಣನಂತಿದ್ದರು. ಅವರು ನಿಧನರಾದಾಗ ನಾನು ಕ್ವಾರೆಂಟೈನ್ನಲ್ಲಿದ್ದೆ. ಹೀಗಾಗಿ ಆಗ ಬರಲು ಆಗಿರಲಿಲ್ಲ’ ಎಂದರು.</p>.<p>‘ಮುಂಬೈ ಕರ್ನಾಟಕ ಭಾಗದಲ್ಲಿ ಒಬ್ಬ ಪ್ರಭಾವಶಾಲಿ ನಾಯಕರಾಗಿದ್ದ ಅಂಗಡಿ. ಈ ಭಾಗದಲ್ಲಿ ಪಕ್ಷವನ್ನು ಕಟ್ಟಿ ಬೆಳಸಿದವರು. ಪಕ್ಷ ನಿಷ್ಠೆ, ಸಿದ್ಧಾಂತವನ್ನು ಅವರಿಂದ ಕಲಿಯಬೇಕು ರೈಲ್ವೆ ಖಾತೆ ರಾಜ್ಯ ಸಚಿವರಾದ ಬಳಿಕ ಹತ್ತಾರು ಸಚಿವರು ಮಾಡಿದ್ದಕ್ಕಿಂತ ಹೆಚ್ಚು ಹಾಗೂ<br />ಅತಿ ಹೆಚ್ಚು ಅನುದಾನವನ್ನು ರಾಜ್ಯಕ್ಕೆ ತಂದಿದ್ದಾರೆ’ ಎಂದು ಸ್ಮರಿಸಿದರು.</p>.<p>‘ಸುರೇಶ ಅಂಗಡಿ ಸ್ಮಾರಕ ಮತ್ತು ಬೆಳಗಾವಿ- ಯಶವಂತಪುರ ರೈಲಿಗೆ ಅವರ ಹೆಸರು ಇಡುವ ವಿಚಾರ ಸರ್ಕಾರದ ಮುಂದೆ ಇದೆ. ಪರಿಶೀಲನೆ ಮಾಡುತ್ತೇವೆ’ ಎಂದು ಹೇಳಿದರು. ನಂತರ ಕುಟುಂಬದವರಿಗೆ ಸಾಂತ್ವನ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>