<p>ಖಾನಾಪುರ: ತಾಲ್ಲೂಕಿನ ನಂದಗಡ ಗ್ರಾಮದ ಗ್ರಾಮದೇವಿ ಜಾತ್ರೆ 2025ರ ಫೆಬ್ರುವರಿ ತಿಂಗಳಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ. ಈಗಾಗಲೇ ಜಾತ್ರಾ ಸಮಿತಿ ರಚನೆಯಾಗಿದೆ. ಜಾತ್ರೆಯ ಪೂರ್ವ ಸಿದ್ಧತೆಗಳು ಪ್ರಾರಂಭಗೊಂಡಿವೆ ಎಂದು ಗ್ರಾಮದ ಹಿರಿಯ ಅಡಿವೆಪ್ಪ ಕೋಟಿ ಹೇಳಿದರು.</p>.<p>ಮಂಗಳವಾರ ಗ್ರಾಮದಲ್ಲಿ ಜರುಗಿದ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ‘ನಂದಗಡ ಗ್ರಾಮದೇವಿ ಜಾತ್ರೆ 1999ರಲ್ಲಿ ನಡೆದಿತ್ತು. ಈಗ 25 ವರ್ಷಗಳ ನಂತರ ನಡೆಯಲಿದೆ. ಜಾತ್ರೆಯನ್ನು ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಲಾಗಿದೆ’ ಎಂದು ವಿವರಿಸಿದರು.</p>.<p>ಸಭೆಯಲ್ಲಿ ಭಾಗವಹಿಸಿದ್ದ ನಂದಗಡ ಜಾತ್ರಾ ಸಮಿತಿಯ ಪದಾಧಿಕಾರಿಗಳು ಮತ್ತು ಗ್ರಾಮದ ಹಿರಿಯರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.</p>.<p>ಬಳಿಕ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕಗೊಂಡ ನಂದಗಡ ಗ್ರಾಮಸ್ಥ ಮಹಾಂತೇಶ ರಾಹೂತ ಅವರನ್ನು ಜಾತ್ರಾ ಸಮಿತಿ ವತಿಯಿಂದ ಗೌರವರಿಸಲಾಯಿತು.</p>.<p>ಜಾತ್ರಾ ಸಮಿತಿ ಅಧ್ಯಕ್ಷ ಸುಭಾಸ ಪಾಟೀಲ, ಉಪಾಧ್ಯಕ್ಷ ವಿಜಯ ಅರಗಾವಿ, ರಾಜು ಕಬ್ಬೂರ, ಡಾ.ರಮೇಶ ಪಾಟೀಲ, ಮಹಾಂತೇಶ ವಾಲಿ, ಶಂಕರ ಸೋನೊಳ್ಳಿ, ಸುಧೀರ ಕಬ್ಬೂರ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಖಾನಾಪುರ: ತಾಲ್ಲೂಕಿನ ನಂದಗಡ ಗ್ರಾಮದ ಗ್ರಾಮದೇವಿ ಜಾತ್ರೆ 2025ರ ಫೆಬ್ರುವರಿ ತಿಂಗಳಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ. ಈಗಾಗಲೇ ಜಾತ್ರಾ ಸಮಿತಿ ರಚನೆಯಾಗಿದೆ. ಜಾತ್ರೆಯ ಪೂರ್ವ ಸಿದ್ಧತೆಗಳು ಪ್ರಾರಂಭಗೊಂಡಿವೆ ಎಂದು ಗ್ರಾಮದ ಹಿರಿಯ ಅಡಿವೆಪ್ಪ ಕೋಟಿ ಹೇಳಿದರು.</p>.<p>ಮಂಗಳವಾರ ಗ್ರಾಮದಲ್ಲಿ ಜರುಗಿದ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ‘ನಂದಗಡ ಗ್ರಾಮದೇವಿ ಜಾತ್ರೆ 1999ರಲ್ಲಿ ನಡೆದಿತ್ತು. ಈಗ 25 ವರ್ಷಗಳ ನಂತರ ನಡೆಯಲಿದೆ. ಜಾತ್ರೆಯನ್ನು ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಲಾಗಿದೆ’ ಎಂದು ವಿವರಿಸಿದರು.</p>.<p>ಸಭೆಯಲ್ಲಿ ಭಾಗವಹಿಸಿದ್ದ ನಂದಗಡ ಜಾತ್ರಾ ಸಮಿತಿಯ ಪದಾಧಿಕಾರಿಗಳು ಮತ್ತು ಗ್ರಾಮದ ಹಿರಿಯರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.</p>.<p>ಬಳಿಕ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕಗೊಂಡ ನಂದಗಡ ಗ್ರಾಮಸ್ಥ ಮಹಾಂತೇಶ ರಾಹೂತ ಅವರನ್ನು ಜಾತ್ರಾ ಸಮಿತಿ ವತಿಯಿಂದ ಗೌರವರಿಸಲಾಯಿತು.</p>.<p>ಜಾತ್ರಾ ಸಮಿತಿ ಅಧ್ಯಕ್ಷ ಸುಭಾಸ ಪಾಟೀಲ, ಉಪಾಧ್ಯಕ್ಷ ವಿಜಯ ಅರಗಾವಿ, ರಾಜು ಕಬ್ಬೂರ, ಡಾ.ರಮೇಶ ಪಾಟೀಲ, ಮಹಾಂತೇಶ ವಾಲಿ, ಶಂಕರ ಸೋನೊಳ್ಳಿ, ಸುಧೀರ ಕಬ್ಬೂರ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>