<p><strong>ರಾಮದುರ್ಗ:</strong> ಇಲ್ಲಿನ ನೇಕಾರ ಪೇಟೆಯ ರುದ್ರಭೂಮಿಯಲ್ಲಿ ಶಿವನ ಮೂರ್ತಿಯ ಮುಂಭಾಗದಲ್ಲಿ ನಿರ್ಮಿಸಿದ್ದ ನಂದಿ ಮತ್ತು ಹರಿಶ್ಚಂದ್ರ ಮೂರ್ತಿಗಳನ್ನು ವಿರೂಪಗೊಳಿಸಲಾಗಿದೆ.</p>.<p>ಶಿವನ ದೇವಾಲಯದ ಮುಂಭಾಗದಲ್ಲಿ ನಿರ್ಮಿಸಿದ ನಂದಿ ವಿಗ್ರಹದ ಕೊಂಬನ್ನು ಕಲ್ಲಿನಿಂದ ಒಡೆದು ಭಗ್ನಗೊಳಿಸಲಾಗಿದೆ. ಅಲ್ಲಿಯೇ ಇದ್ದ ಹರಿಶ್ಚಂದ್ರ ವಿಗ್ರಹವನ್ನು ಒಡೆದು ಹಾಕಲಾಗಿದೆ. ಇದರಿಂದಾಗಿ ಕೆಲ ಹೊತ್ತು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.</p>.<p>ಸಿಪಿಐ ಶಶಿಕಾಂತ ವರ್ಮಾ, ಶಾಸಕ ಮಹಾದೇವಪ್ಪ ಯಾದವಾಡ ಮತ್ತು ನೇಕಾರ ಸಮಾಜದ ಮುಖಂಡರು ಭೇಟಿ ನೀಡಿ ಪರಿಶೀಲಿಸಿದರು.</p>.<p>ನೇಕಾರ ಪೇಟೆಯ ಜನ ಶಾಂತಿ ಪ್ರಿಯರು. ಎಂದಿಗೂ ಕೋಮು ಭಾವನೆಗಳಿಗೆ ಒತ್ತು ನೀಡಿದವರಲ್ಲ. ಆದರೆ ಯಾರೋ ದುಷ್ಕರ್ಮಿಗಳು ವಿಗ್ರಹಗಳನ್ನು ವಿರೂಪಗೊಳಿಸಿ ಶಾಂತಿ ಕದಡಿದ್ದಾರೆ. ತಕ್ಷಣ ದುಷ್ಕರ್ಮಿಗಳನ್ನು ಬಂಧಿಸಬೇಕು ಎಂದು ಶಾಸಕ ಮಹಾದೇವಪ್ಪ ಯಾದವಾಡ ಅಧಿಕಾರಿಗಳಿಗೆ ಸೂಚಿಸಿದರು. ರಾಮದುರ್ಗದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮದುರ್ಗ:</strong> ಇಲ್ಲಿನ ನೇಕಾರ ಪೇಟೆಯ ರುದ್ರಭೂಮಿಯಲ್ಲಿ ಶಿವನ ಮೂರ್ತಿಯ ಮುಂಭಾಗದಲ್ಲಿ ನಿರ್ಮಿಸಿದ್ದ ನಂದಿ ಮತ್ತು ಹರಿಶ್ಚಂದ್ರ ಮೂರ್ತಿಗಳನ್ನು ವಿರೂಪಗೊಳಿಸಲಾಗಿದೆ.</p>.<p>ಶಿವನ ದೇವಾಲಯದ ಮುಂಭಾಗದಲ್ಲಿ ನಿರ್ಮಿಸಿದ ನಂದಿ ವಿಗ್ರಹದ ಕೊಂಬನ್ನು ಕಲ್ಲಿನಿಂದ ಒಡೆದು ಭಗ್ನಗೊಳಿಸಲಾಗಿದೆ. ಅಲ್ಲಿಯೇ ಇದ್ದ ಹರಿಶ್ಚಂದ್ರ ವಿಗ್ರಹವನ್ನು ಒಡೆದು ಹಾಕಲಾಗಿದೆ. ಇದರಿಂದಾಗಿ ಕೆಲ ಹೊತ್ತು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.</p>.<p>ಸಿಪಿಐ ಶಶಿಕಾಂತ ವರ್ಮಾ, ಶಾಸಕ ಮಹಾದೇವಪ್ಪ ಯಾದವಾಡ ಮತ್ತು ನೇಕಾರ ಸಮಾಜದ ಮುಖಂಡರು ಭೇಟಿ ನೀಡಿ ಪರಿಶೀಲಿಸಿದರು.</p>.<p>ನೇಕಾರ ಪೇಟೆಯ ಜನ ಶಾಂತಿ ಪ್ರಿಯರು. ಎಂದಿಗೂ ಕೋಮು ಭಾವನೆಗಳಿಗೆ ಒತ್ತು ನೀಡಿದವರಲ್ಲ. ಆದರೆ ಯಾರೋ ದುಷ್ಕರ್ಮಿಗಳು ವಿಗ್ರಹಗಳನ್ನು ವಿರೂಪಗೊಳಿಸಿ ಶಾಂತಿ ಕದಡಿದ್ದಾರೆ. ತಕ್ಷಣ ದುಷ್ಕರ್ಮಿಗಳನ್ನು ಬಂಧಿಸಬೇಕು ಎಂದು ಶಾಸಕ ಮಹಾದೇವಪ್ಪ ಯಾದವಾಡ ಅಧಿಕಾರಿಗಳಿಗೆ ಸೂಚಿಸಿದರು. ರಾಮದುರ್ಗದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>